Akrama sakrama yojana: 2 ಲಕ್ಷ ಅಕ್ರಮ ಕೃಷಿ ಪಂಪ್ ಸೆಟ್ ಸಕ್ರಮಗೊಳಿಸಿದ ರಾಜ್ಯ ಸರಕಾರ! ಯಾವೆಲ್ಲ ಪಂಪ್ ಸೆಟ್ ಸಕ್ರಮ ವ್ಯಾಪ್ತಿಗೆ ಬರುತ್ತವೆ?

Facebook
Twitter
Telegram
WhatsApp

ರಾಜ್ಯ ಸರಕಾರದಿಂದ ಈ ಭಾರಿ ಮೊನ್ನೆ ನಡೆದ ಸಂಪುಟ ಸಭೆಯಲ್ಲಿ ರಾಜ್ಯದ್ಯಂತ ವಿವಿಧ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿರುವ ರೈತರ ಒಟ್ಟು 2 ಲಕ್ಷ ಅಕ್ರಮ ಕೃಷಿ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲು 6,099 ಕೋಟಿ ಅನುದಾನ ಬಿಡುಗಡೆಗೆ ಅನುಮೋದನೆ ನೀಡಲಾಗಿದೆ.

ಈ ಕ್ರಮದಿಂದ ರೈತರ ತಮ್ಮ ಕೃಷಿ ಬೆಳೆಗಳಿಗೆ ನೀರನ್ನು ಪೂರೈಸಲು ಅಕ್ರಮವಾಗಿ ವಿದ್ಯುತ್ ಸೌಲಭ್ಯವನ್ನು ಪಡೆದಿರುವ 2 ಲಕ್ಷ ಪಂಪ್ ಸೆಟ್ ಗಳ ಸಂಪರ್ಕವನ್ನು ಸಕ್ರಮ ವ್ಯಾಪ್ತಿಗೆ ಬರುತ್ತವೆ.

ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಈ ಕುರಿತು ಮಾಹಿತಿ ಹಂಚಿಕೊಂಡ ಕಾನೂನು ಸಚಿವ ಹೆಚ್.ಕೆ ಪಾಟೀಲ್ ರವರು ಕಳೆದ 8 ವರ್ಷದಲ್ಲಿ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಿಂದ(Escom) 2 ಲಕ್ಷದಷ್ಟು ಕೃಷಿ ನೀರಾವರಿ ಬಳಕೆ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲು 6,099 ಕೋಟಿ ವೆಚ್ಚ ಭರಿಸಲಾಗಿದ್ದು, ರೈತರಿಗೆ ಅನುಕೂಲ ಮಾಡಿಕೊಡುವ ದೇಸೆಯಲ್ಲಿ ಈ ಅನುದಾನಕ್ಕೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Annabhagya September amount: ಅನ್ನಭಾಗ್ಯ ಯೋಜನೆ ಸೆಪ್ಟೆಂಬರ್ ತಿಂಗಳ ಹಣ ಬಿಡುಗಡೆ! ನಿಮ್ಮ ಖಾತೆಗೆ ಹಣ ಬಂದಿರುವುದನ್ನು ಚೆಕ್ ಮಾಡಿ.

Akrama sakrama Yojanae- ಯಾವೆಲ್ಲ ಪಂಪ್ ಸೆಟ್  ಸಕ್ರಮ ವ್ಯಾಪ್ತಿಗೆ ಬರುತ್ತವೆ?

1) ಕೃಷಿ ನೀರಾವರಿ ಪಂಪ್ ಸೆಟ್ ಗಳಿಗೆ ಮಾತ್ರ ಅನ್ವಯವಾಗುತ್ತದೆ.

2) 2015 ರಿಂದ 22 ಸೆಪ್ಟೆಂಬರ್ 2023 ರ ವರಗೆ ಈಗಾಗಲೇ ಚಾಲ್ತಿಯಲ್ಲಿರುವ ಐಪಿ ಸೆಟ್ ಗಳು ಸಕ್ರಮ ವ್ಯಾಪ್ತಿಗೆ ಬರುತ್ತದೆ.

3) 23 ಸೆಪ್ಟೆಂಬರ್ 2023  ರ ನಂತರ ಕೃಷಿ ಪಂಪ್ ಸೆಟ್ ಗಳಿಗೆ  ಯಾರಾದರು ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದರೆ ಸಕ್ರಮ ವ್ಯಾಪ್ತಿಗೆ ಒಳಪಡುವುದಿಲ್ಲ.

ಇದನ್ನೂ ಓದಿ: PM-kisan amount- ಈ ರೀತಿ  ಸಂದೇಶ ಬಂದವರಿಗಿಲ್ಲಾ ಪಿ ಎಂ ಕಿಸಾನ್ ಯೋಜನೆ ಹಣ!

PM Kusum solar pump set  subsidy yojana-ಸೋಲಾರ್ ಪಂಪ್ ಸೆಟ್ ಸ್ಥಾಪನೆಗೆ ರೈತರಿಗೆ ಈ ಯೋಜನೆಯಡಿ ಇದೆ ಅವಕಾಶ:

ಪಿ.ಎಂ ಕುಸುಮ ಯೋಜನೆಯಡಿ ರೈತರು ಕೇವಲ ಒಟ್ಟು ಕಾಮಗಾರಿ ವೆಚ್ಚದಲ್ಲಿ ಶೇ 20 ರಷ್ಟು ಹಣವನ್ನು ಹಾಕಿ ಸೋಲಾರ್ ಪಂಪ್ ಸೆಟ್ ಅಳವಡಿಕೆ ಮಾಡಿಕೊಳ್ಳಬವುದಾಗಿದೆ. ಈ ಯೋಜನೆಗ ಕೇಂದ್ರ ಸರಕಾರದಿಂದ 30% ಮತ್ತು ರಾಜ್ಯ ಸರಕಾರದಿಂದ 50% ಸಹಾಯಧನ ಒದಗಿಸಲಾಗುತ್ತದೆ.

PM- Kusum Solar subsidy Scheme- Apply Now

ಪಿ ಎಂ ಕುಸುಮ ಯೋಜನೆಯ ಕನ್ನಡ ಮಾರ್ಗಸೂಚಿಯ ಕೈಪಿಡಿ: Download Now

Facebook
Twitter
Telegram
WhatsApp
Picture of siddesh

siddesh

Leave a Comment

Top Stories

land documents

agricultural land documents: ಜಮೀನನ್ನು ಖರೀದಿ ಮಾಡುವ ಮುನ್ನ ಯಾವೆಲ್ಲಾ ದಾಖಲೆಗಳನ್ನು ಚೆಕ್ ಮಾಡಬೇಕು?

ಕೃಷಿ ಭೂಮಿ ಖರೀದಿಸುವ ಮುಂಚೆ ಯಾವ ಯಾವ ದಾಖಲೆಗಳನ್ನು ಮುಖ್ಯವಾಗಿ ಚೆಕ್ ಮಾಡಬೇಕು ಮತ್ತು ಯಾವೆಲ್ಲ ಮಾಹಿತಿಯನ್ನು ಪರೀಶೀಲನೆ ಮಾಡಬೇಕು? ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಒಂದೊಮ್ಮೆ ನೀವು ಖರೀದಿ ಮಾಡುತ್ತಿರುವ ಜಮೀನಿನ ದಾಖಲೆಗಳು

sarakri yojane

sarakri yojane- ಸಂಚಾರಿ ಮಾರಾಟ ಮಳಿಗೆ ಖರೀದಿಗೆ ರೂ 5.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

ಡಾ ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದಿಂದ ವಿವಿಧ ಯೋಜನೆಯಡಿ ಸಬ್ಸಿಡಿಯ ಪ್ರಯೋಜನ ಪಡೆದುಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 30-10-2024 ಕೊನೆಯ ದಿನಾಂಕವಾಗಿದೆ. ಕುಶಲಕಮಿಗಳ ಅಭಿವೃದ್ದಿಗೆ

Crop insurance

Rabi Crop Insurance-ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಅರ್ಜಿ ಆಹ್ವಾನ!

ಪ್ರಸ್ತುತ ರಾಜ್ಯದಲ್ಲಿ ಮುಂಗಾರು ಹಂಗಾಮು ಮುಕ್ತಾಯವಾಗಿ ಹಿಂಗಾರು ಹಂಗಾಮು ಆರಂಭವಾಗುತ್ತಿದ್ದು ರೈತರು ತಮ್ಮ ಬೆಳೆಗಳಿಗೆ ವಿಮೆಯನ್ನು(Rabi Crop Insurance) ಮಾಡಿಸಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಮ್ಮ ಹಳ್ಳಿ ವ್ಯಾಪ್ತಿಯಲ್ಲಿ ಯಾವೆಲ್ಲ ಬೆಳೆಗಳಿಗೆ ವಿಮೆಯನ್ನು ಮಾಡಿಸಬಹುದು? ಅರ್ಜಿ