BPL ಮತ್ತು APL​​​ ಕಾರ್ಡ್​ದಾರರಿಗೆ ಆಹಾರ ಇಲಾಖೆಯಿಂದ ಗುಡ್ ನ್ಯೂಸ್! ಮಿಸ್ ಮಾಡ್ದೆ ಸುದ್ದಿ ನೋಡಿ.

October 5, 2023 | Siddesh

ರಾಜ್ಯ ಸರಕಾರದಿಂದ ಗ್ಯಾರಂಟಿ ಯೋಜನೆಗಳ ಜಾರಿಯ ನಂತರ ವಿವಿಧ ಯೋಜನೆಯಡಿ ಸೌಲಭ್ಯ ಪಡೆಯಲು ರೇಷನ್ ಕಾರ್ಡನಲ್ಲಿ ನಮೂದಿಸಿರುವ ವಿವರಗಳು ಸರಿಯಾಗಿರುವುದು ಕಡ್ಡಾಯವಾಗಿರುತ್ತದೆ.

ಈ ಎಲ್ಲಾ ಕಾರಣಗಳಿಂದ ರೇಷನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸುವವರು ಸಂಖ್ಯೆಯು ಹೆಚ್ಚಿರುವುದರಿಂದ ರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಮತ್ತೊಮ್ಮೆ ಹೆಚ್ಚುವರಿ 9 ದಿನಗಳವರೆಗೆ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ.

ಕಳೆದ ತಿಂಗಳು ಬಿಪಿಎಲ್, ಎಪಿಎಲ್ ಕಾರ್ಡ್ ತಿದ್ದುಪಡಿಗೆ ಇಲಾಖೆಯಿಂದ ಅವಕಾಶ ನೀಡಿತ್ತು. ಅತೀ ಹೆಚ್ಚು ಅರ್ಜಿದಾರರಿಂದ ಸರ್ವರ್ ಸಮಸ್ಯೆ ಸೇರಿದಂತೆ ವಿವಿಧ ಕಾರಣಕ್ಕೆ ತಿದ್ದುಪಡಿ, ಹೆಸರು ಸೇರ್ಪಡೆಗೆ ಪಡಿತರ ಚೀಟಿದಾರರಿಗೆ ಸಾಧ್ಯವಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಅಕ್ಟೋಬರ್ 5 ರಿಂದ ಅಕ್ಟೋಬರ್ 13 ರವರೆಗೆ ಮತ್ತೆ 9 ದಿನಗಳ ಕಾಲ ತಿದ್ದುಪಡಿ ಮತ್ತು ಪಡಿತರ ಚೀಟಿಗೆ ಹೊಸ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಿ ಆದೇಶ ಹೊರಡಿಸಿದೆ.

ಈ ಮಾಹಿತಿಯನ್ನು ತಪ್ಪದೇ ಇತರರಿಗೂ ಶೇರ್ ಮಾಡಿ ಏಕೆಂದರೆ ಪಡಿತರ ಚೀಟಿ ತಿದ್ದುಪಡಿ ಮಾಡಿಕೊಳ್ಳದ ಗ್ರಾಹಕರಿಗೆ ಈ ಮಾಹಿತಿ ಸಹಕಾರಿಯಾಗಿದೆ.

ಇದನ್ನೂ ಓದಿ: ಒಂದು ಭಾರಿಯು ಅನ್ನಭಾಗ್ಯ ಯೋಜನೆಯಡಿ ಹಣ ಜಮಾ ಅಗಿಲ್ಲವೇ? ಇಲ್ಲಿದೆ ಸೂಕ್ತ ಪರಿಹಾರ ಕ್ರಮಗಳು.

ration card application date-ವಿಭಾಗವಾರು ಅರ್ಜಿ ಸಲ್ಲಿಕೆ ದಿನಾಂಕ ನಿಗದಿ ಮಾಡಲಾಗಿದೆ:

ಈ ಕುರಿತಂತೆ ಆಹಾರ ಇಲಾಖೆಯ ಹೆಚ್ಚುವರಿ ನಿರ್ದೇಶ ಘ್ಯಾನೇಂದ್ರ ಅವರು ಮಾಹಿತಿ ನೀಡಿದ್ದು, ಅಕ್ಟೋಬರ್ 5ರ ಇಂದಿನಿಂದ ಅ.13ರವರೆಗೆ ಮತ್ತೆ ಬಿಪಿಎಲ್, ಎಪಿಎಲ್ ಕಾರ್ಡ್ ಗಳಲ್ಲಿನ ತಿದ್ದುಪಡಿ, ಸೇರ್ಪಡೆಗೆ ಅವಕಾಶ ನೀಡಲಾಗಿದ್ದು. ಆದರೆ ರಾಜ್ಯಾದ್ಯಂತ ಏಕಕಾಲಕ್ಕೆ ಅವಕಾಶ ನೀಡಲಾಗಿಲ್ಲ ಬದಲಾಗಿ ತಲಾ ಮೂರು ದಿನಗಳಂತೆ ವಿಭಾಗವಾರು ಅವಕಾಶ ನೀಡಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ration card application- ಯಾವ ಯಾವ ಜಿಲ್ಲೆಗಳಲ್ಲಿ ಯಾವ ದಿನ ತಿದ್ದುಪಡಿಗೆ ಅರ್ಜಿ ಸ್ವೀಕರಿಸಲಾಗುತ್ತದೆ?

ಮೊದಲ ಹಂತದಲ್ಲಿ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿನ BPL, APL ಕಾರ್ಡ್ ದಾರರಿಗೆ ಅಕ್ಟೋಬರ್ 5 ಇಂದಿನಿಂದ 7ರವರೆಗೆ ಅವಕಾಶ ನೀಡಲಾಗಿದೆ. ಈ ಜಿಲ್ಲೆಯ ಪಡಿತರ ಚೀಟಿದಾರರು ತಿದ್ದುಪಡಿ ಮತ್ತು ಹೊಸ ಸದಸ್ಯರ ಸೆರ್ಪಡೆಗೆ ಅರ್ಜಿ ಸಲ್ಲಿಸಬವುದು.

ಬೆಳಗ್ಗೆ 10 ರಿಂದ ರಾತ್ರಿ 7 ಗಂಟೆಯವರೆಗೆ ತಿದ್ದುಪಡಿ, ಸೇರ್ಪಡೆಗೆ ಅವಕಾಶ ನೀಡಲಾಗಿದ್ದು, ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಮಾತ್ರ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ಇದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Gruhalakshmi amount- ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಬಂದಿರುವುದನ್ನು ಚೆಕ್ ಮಾಡುವುದು ಹೇಗೆ?

ಎರಡನೇ ಹಂತದಲ್ಲಿ ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಚಾಮರಾಜನಗರ, ದಕ್ಷಿಣ ಕನ್ನಡ, ಹಾವೇರಿ, ಹಾಸನ, ಗದಗ, ಮೈಸೂರು, ವಿಜಯಪುರ, ಉತ್ತರ ಕನ್ನಡ, ಉಡುಪಿ ಸೇರಿದಂತೆ 15 ಜಿಲ್ಲೆಗಳ ರೇಷನ್ ಕಾರ್ಡ್ ದಾರರಿಗೆ ಅವಕಾಶ ನೀಡಲಾಗಿದ್ದು. ಅಕ್ಟೋಬರ್ 8 ಇಂದಿನಿಂದ 10ರವರೆಗೆ ಅವಕಾಶ ನೀಡಲಾಗಿದೆ.

ಮೂರನೇ ಹಂತದಲ್ಲಿ ಬೀದರ್, ಚಿಕ್ಕಬಳ್ಳಾಪುರ, ಬಳ್ಳಾರಿ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಕೊಪ್ಪಳ, ಶಿವಮೊಗ್ಗ, ರಾಮನಗರ, ಯಾದಗಿರಿ, ತುಮಕೂರು, ವಿಜಯನಗರ ಸೇರಿದಂತೆ ಒಟ್ಟು 14 ಜಿಲ್ಲೆಗಳ ರೇಷನ್ ಕಾರ್ಡ್ ದಾರರಿಗೆ ಅಕ್ಟೋಬರ್ 11ರಿಂದ 13ರವರೆಗೆ ತಿದ್ದುಪಡಿ, ಹೊಸ ಸದಸ್ಯರ ಹೆಸರು ಸೇರ್ಪಡೆಗೆ ಅವಕಾಶ ಮಾಡಿಕೊಡಲಾಗಿದೆ.

Ration card tiddupadi- ತಿದ್ದುಪಡಿ ಅರ್ಜಿ ಸ್ಥಿತಿ ಚೆಕ್ ಮಾಡುವ ವಿಧಾನ:

ಇಲ್ಲಿ ಕ್ಲಿಕ್ ಮಾಡಿ> ration card application status check ಈ ಅಂಕಣದಲ್ಲಿ ವಿವರಿಸಿರುವ ವಿಧಾನವನ್ನು ಅನುಸರಿಸಿ ಈಗಾಗಲೇ ರೇಷನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಿದರೆ ನಿಮ್ಮ ಅರ್ಜಿ ಯಾವ ಹಂತದಲ್ಲಿದೆ ಎಂದು ನಿಮ್ಮ ಮೊಬೈಲಲ್ಲೇ ಅರ್ಜಿ ಸ್ಥಿತಿ ಚೆಕ್ ಮಾಡಿಕೊಳ್ಳಬವುದಾಗಿದೆ.

ಇದನ್ನೂ ಓದಿ: PM-kisan amount- ಈ ರೀತಿ  ಸಂದೇಶ ಬಂದವರಿಗಿಲ್ಲಾ ಪಿ ಎಂ ಕಿಸಾನ್ ಯೋಜನೆ ಹಣ!

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: