Best life insurance plan-ತೆಂಗಿನ ಮರ ಏರುವ ವೃತ್ತಿಪರ ಕೌಶಲ್ಯದಾರರಿಗೆ ರೂ 5 ಲಕ್ಷದವರೆಗೆ ವಿಮಾ ನೀಡಲು ಅರ್ಜಿ ಆಹ್ವಾನ!
Best life insurance plan: ತೆಂಗಿನ ಮರ ಏರುವ ವೃತ್ತಿಪರ ಕೌಶಲ್ಯದಾರರಿಗೆ ರೂ 5 ಲಕ್ಷದವರೆಗೆ ವಿಮಾ ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ತೆಂಗಿನ ಮರ ಏರುವ ವೃತ್ತಿಪರ ಕೌಶಲ್ಯದಾರರಿಗೆ ರೂ 5 ಲಕ್ಷದವರೆಗೆ ವಿಮಾ ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಜಿದಾರರು ಈ ಅಂಕಣದಲ್ಲಿ ವಿವರಿಸಿರುವ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.
ಯಾರೆಲ್ಲ ಅರ್ಜಿ ಸಲ್ಲಿಸಬಹು? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳೇನು? ಎಲ್ಲಿ ಅರ್ಜಿ ಸಲ್ಲಿಸಬೇಕು? ಈ ಯೋಜನೆಯಡಿ ಯಾವೆಲ್ಲ ಪ್ರಯೋಜನ ಪಡೆಯಬಹುದು ಎನ್ನುವ ಸಂಪೂರ್ಣ ಮಾಹಿತಿ ಈ ಕೆಳಗೆ ವಿವರಿಸಲಾಗಿದೆ.
Kera Suraksha Insurance Scheme- ಯೋಜನೆಯ ವಿವರ:
ತೆಂಗು ಅಭಿವೃದ್ದಿ ಮಂಡಳಿವತಿಯಿಂದ ವಿಮಾ ಕಂಪನಿ ಸಹಯೋಗದೊಂದಿಗೆ ತೆಂಗಿನ ಮರ ಹತ್ತುವವರು/ ತೆಂಗಿನ ಕಾಯಿ ಕೀಳುವವರು/ ನೀರಾ ತಂತ್ರಜ್ಞರು/ ಕೃಷಿ ಕಾರ್ಮಿಕರು ತೆಂಗಿನ ತೋಟದಲ್ಲಿ ಕೆಲಸ ಮಾಡುವಾಗ ಅಕಸ್ಮಿಕ ಅಪಘಾತಕ್ಕೊಳಗಾಗಿ ಮರಣ ಹೊಂದಿದಲ್ಲಿ/ ಅಂಗವಿಕಲರಾಗಿದ್ದಲ್ಲಿ ವಿವಿಧ ಹಂತದಲ್ಲಿ ವಿಮೆಯನ್ನು ನೀಡಲು "ಕೇರಾ ಸುರಕ್ಷಾ ಯೋಜನೆಯನ್ನು" ಅನುಷ್ಥಾನ ಮಾಡಲಾಗುತ್ತದೆ.
Application last date- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20 ಫೆಬ್ರವರಿ 2024
ಎಲ್ಲಿ ಅರ್ಜಿ ಸಲ್ಲಿಸಬೇಕು?
ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಅರ್ಜಿ ಸಲ್ಲಿಸಲು ಅರ್ಜಿಯನ್ನು ಪೊಸ್ಟ್ ಮೂಲಕ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಿಕೊಡಬೇಕು.
ಪ್ರಾದೇಶಕ ಕಚೇರಿ: ನಿರ್ದೇಶಕರು, ತೆಂಗು ಅಭೀವೃದ್ದಿ ಮಂಡಳಿ, ಹುಳಿಮಾವು, ಬನ್ನೇರು ಘಟ್ಟ ರಸ್ತೆ, ಬೆಂಗಳೂರು-560076 ದೂರವಾಣಿ ಸಂಖ್ಯೆ: 080-26593750, 808-26593743
ಅಥವಾ ನಿಮ್ಮ ಹತ್ತಿರದ ತೆಂಗು ಬೆಳೆಗಾರರ ಸಂಘದ ಕಚೇರಿಯನ್ನು ಭೇಟಿ ಮಾಡಿಯು ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: Sheep and Goat farming-ಕುರಿ,ಮೇಕೆ ಸಾಕಾಣಿಕೆಗಾಗಿ 1.75 ಲಕ್ಷ ಘಟಕ ವೆಚ್ಚದಲ್ಲಿ ಸಾಲ ಮತ್ತು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ!
Required documents for application-ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು:
1) ಅರ್ಜಿ ನಮೂನೆ.
2) ಅರ್ಜಿದಾರರ ವಯಸ್ಸಿನ ಪುರಾವೆ ಪತ್ರ ನೀಡಬೇಕು. (ಅರ್ಜಿದಾರರ ವಯಸ್ಸು 18- 65 ರ ನಡುವೆ ಇರಬೇಕು).
3) ಆಧಾರ ಕಾರ್ಡ್ ಪ್ರತಿ.
4) ಬ್ಯಾಂಕ್ ಪಾಸ್ ಬುಕ್ ಪ್ರತಿ.
5) ರೈತರ ವಾರ್ಷಿಕ ವಂತಿಗೆ ಪಾವತಿಸಿದ ರಶೀದಿ (ತೆಂಗಿನ ಮರ ಹತ್ತುವವರು/ ತೆಂಗಿನ ಕಾಯಿ ಕೀಳುವವರು/ ನೀರಾ ತಂತ್ರಜ್ಞರು ವಾರ್ಷಿಕ ವಂತಿಗೆ ರೂ. 94.00 ಅನ್ನು ಪಾವತಿಸಲು ಡಿಡಿ ಮೂಲಕ Coconut Development Board, payble at Cochin ಪಾವತಿಸಬಹುದು. ಅಥವಾ NEFT/BHIM/Phone pay/ Google Pay/ PayTM/ ಮೂಲಕ State Bank of India, Iyyatti In, Ernakulam Branch (Acc No. 61124170321, IFSC code:SBIN0031449 ಗೆ ಪಾವತಿಸಬೇಕು.
Insurance premium details- ಅರ್ಜಿ ಶುಲ್ಕದ ವಿವರ:
ರೈತರು ಪಾವತಿ ಮಾಡಬೇಕಾದ ಮೊತ್ತ: 94.00 rs(1 ವರ್ಷದ ಅವಧಿಗೆ) ತೆಂಗು ಅಭಿವೃದ್ದಿ ಮಂಡಳಿಯ ಸಹಾಯಧನ: 281.00 rs , ಒಟ್ಟು ವಿಮಾ ಮೊತ್ತ: 375.00 rs
Insurance benefits details- ವಿಮಾ ಸೌಲಭ್ಯದ ವಿವರ:
ಸೌಲಭ್ಯದ ವಿವರ |
ವಿಮೆಯ ಮೊತ್ತ |
ಮರಣ ಹೊಂದಿದಲ್ಲಿ |
5,00,000.00 |
ಶಾಶ್ವತ ಅಂಗವಿಕಲತೆ |
2,50,00.00 |
ಆಸ್ಪತ್ರೆ ವೆಚ್ಚದ ಮರುಪಾವತಿ (ಕನಿಷ್ಠ 24 ಗಂಟೆ ಆಸ್ಪತ್ರೆ ದಾಖಲಾಗಿದ್ದಲ್ಲಿ) |
1,00,000.00 |
ಆಂಬುಲೆನ್ಸ್ ವೆಚ್ಚ |
3,000.00 |
ಅಲ್ಪಕಾಲದ ಅಂಗಾಂಗ ಊನತೆ |
18,000.00 |
ಅಂತ್ಯ ಸಂಸ್ಕಾರದ ವೆಚ್ಚ |
5,000.00 |
ಇದನ್ನೂ ಓದಿ: Monsoon update 2024: ಎಲ್ ನಿನೊ ವಾತಾವರಣ ದುರ್ಬಲ ಈ ವರ್ಷ ಉತ್ತಮ ಮುಂಗಾರು ನಿರೀಕ್ಷೆ, ಹವಾಮಾನ ತಜ್ಞರಿಂದ ಮಾಹಿತಿ!
ಉಪಯುಕ್ತ ವೆಬ್ಸೈಟ್ ಲಿಂಕ್ ಗಳು:
ಕೇರಾ ಸುರಕ್ಷಾ ಯೋಜನೆಯ ಸಂಪೂರ್ಣ ಮಾಹಿತಿಗಾಗಿ: click here
ಅರ್ಜಿ ನಮೂನೆ: Download Now
ತೆಂಗು ಅಭಿವೃದ್ದಿ ಮಂಡಳಿ ಅಧಿಕೃತ ಜಾಲತಾಣ: click here