Farm Pond application-ಶೇ 90 ಸಹಾಯಧನದಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ಮಾಡಿಕೊಳ್ಳಲು ರೈತರಿಂದ ಅರ್ಜಿ ಆಹ್ವಾನ!

ಕೃಷಿ ಇಲಾಖೆಯಿಂದ ಕೃಷಿ ಭಾಗ್ಯ(krishi bhagya)ಯೋಜನೆಯಡಿ ಅರ್ಹ ರೈತರಿಂದ ಶೇ 90 ಸಹಾಯಧನದಲ್ಲಿ ಕೃಷಿ ಹೊಂಡ(Farm Pond) ನಿರ್ಮಾಣ, ಪಾಲಿಥೀನ್ ಹೊದಿಕೆ, ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ (GI Wire Stone Fencing), ಡೀಸೆಲ್ /ಪೆಟ್ರೋಲ್/ಸೋಲಾರ್ ಪಂಪ್ ಸೆಟ್(pump set) ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಕೃಷಿ ಇಲಾಖೆಯಿಂದ ಕೃಷಿ ಭಾಗ್ಯ(krishi bhagya)ಯೋಜನೆಯಡಿ ಅರ್ಹ ರೈತರಿಂದ ಶೇ 90 ಸಹಾಯಧನದಲ್ಲಿ ಕೃಷಿ ಹೊಂಡ(Farm Pond) ನಿರ್ಮಾಣ, ಪಾಲಿಥೀನ್ ಹೊದಿಕೆ, ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ (GI Wire Stone Fencing), ಡೀಸೆಲ್ /ಪೆಟ್ರೋಲ್/ಸೋಲಾರ್ ಪಂಪ್ ಸೆಟ್(pump set) ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಯಾವೆಲ್ಲ ಜಿಲ್ಲೆ ಮತ್ತು ತಾಲ್ಲೂಕುಗಳ ರೈತರು ಅರ್ಜಿ ಸಲ್ಲಿಸಬವುದು? ಅಗತ್ಯ ದಾಖಲಾತಿಗಳೇನು? ಯೋಜನೆ ಅನುಷ್ಠಾನ ಪ್ರಕ್ರಿಯೆ ಹೇಗಿರುತ್ತದೆ? ಯಾವುದಕ್ಕೆ ಎಷ್ಟು ಮೊತ್ತ ನೀಡಲಾಗುತ್ತದೆ? ಎನ್ನುವ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದ್ದು, ಕೃಷಿ ಹೊಂಡ ತೆಗೆಸಿಕೊಳ್ಳಲು ಆಸಕ್ತಿಯಿರುವ ರೈತರಿಗೆ ಈ ಮಾಹಿತಿ ತಲುಪಲು ತಪ್ಪದೇ ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ.

ಕರ್ನಾಟಕ ರಾಜ್ಯವು ಮಳೆಯಾಶ್ರಿತ ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಹವಾಮಾನ ಬದಲಾವಣೆಯಿಂದ ಗಂಭೀರವಾಗಿ ಪ್ರಭಾವಕ್ಕೊಳಗಾಗುವ ರಾಜ್ಯಗಳಲ್ಲಿ ಒಂದಾಗಿದೆ. ರಾಜ್ಯದಲ್ಲಿ ಬೆಳೆ ಹಂಗಾಮುಗಳಲ್ಲಿ ಹೆಚ್ಚುತ್ತಿರುವ ಮಧ್ಯಮ ಶ್ರೇಣಿಯ ಬರ ಮತ್ತು ಪ್ರವಾಹಗಳಿಂದ ಮಳೆಯಾಶ್ರಿತ ಕೃಷಿಯು ಅನಿಶ್ಚಿತವಾಗಿರುತ್ತದೆ. ರಾಜ್ಯದ ಮಳೆಯಾಶ್ರಿತ ಕೃಷಿಯನ್ನು ಜೀವನಾಧಾರಿತ ಕೃಷಿಯಿಂದ ಸುಸ್ಥಿರ ಕೃಷಿಯನ್ನಾಗಿ ರೈತರ ಜೀವನ ಮಟ್ಟವನ್ನು ಉತ್ತಮಪಡಿಸಲು ಕೃಷಿ ಭಾಗ್ಯ ಯೋಜನೆಯನ್ನು ನಿರಂತರವಾಗಿ ಐದು ಒಣ ಹವಾಮಾನ ವಲಯಗಳಲ್ಲಿ ಅನುಷ್ಠಾನಗೊಳಿಸುವ ಉದ್ದೇಶ ಹೊಂದಿದೆ.

ಇದನ್ನೂ ಓದಿ: Self Employment Loan: ಸ್ವಯಂ-ಉದ್ಯೋಗ ನೇರ ಸಾಲ ಯೋಜನೆಗೆ ಆಯ್ಕೆಯಾದ ಫಲಾನುಭವಿಗಳಿಗೆ 5 ಕೋಟಿ ನೇರ ನಗದು ವರ್ಗಾವಣೆ- ಸಚಿವ ಕೃಷ್ಣಬೈರೇಗೌಡ

ಕರ್ನಾಟಕ ರಾಜ್ಯದಲ್ಲಿ ಸುಮಾರು ಶೇ.64 ರಷ್ಟು ಸಾಗುವಳಿ ಪ್ರದೇಶವು ಮಳೆ ಆಶ್ರಿತ ಪ್ರದೇಶವಾಗಿರುತ್ತದೆ. ಇದರಲ್ಲಿ ಶೇ.55 ರಷ್ಟು ಆಹಾರ ಧಾನ್ಯಗಳ ಮತ್ತು ಶೇ.75 ರಷ್ಟು ಎಣ್ಣೆಕಾಳುಗಳ ಉತ್ಪಾದನೆಯು ಮಳೆಯಾಶ್ರಿತ ಪ್ರದೇಶದ ಕೊಡುಗೆಯಾಗಿದೆ. ನೀರಾವರಿ ಪ್ರದೇಶದ ರೈತರಿಗೆ ನೀರಿನ ಲಭ್ಯತೆ ಖಚಿತವಾದ ಕಾರಣ ನೀರಾವರಿಯಲ್ಲಿ ನಿರೀಕ್ಷಿತ ಆದಾಯ ಸಿಗುವುದರಿಂದ, ವಿವಿಧ ಯೋಜನೆಗಳ ಅನುಕೂಲಗಳನ್ನು ಪಡೆದು ವ್ಯವಸಾಯದಲ್ಲಿ ಹೂಡುವಳಿ ಮಾಡುತ್ತಾರೆ. 

ಆದರೆ ಒಣ ಭೂಮಿ ರೈತರ ಆದಾಯ ಮಳೆ ಮೇಲೆ ಅವಲಂಬಿತವಾಗಿರುವುದರಿಂದ ಈ ಸವಲತ್ತುಗಳನ್ನು ಬಳಸಿಕೊಳ್ಳಲು ಸಾಧ್ಯವಾಗದೆ ಇವರ ಜೀವನೋಪಾಯದ ಮೇಲೆ ಪ್ರಭಾವ ಬೀರಿದೆ. ಕಡಿಮೆ ಮಳೆ ಬೀಳುವ ಬಹುತೇಕ ಪ್ರದೇಶಗಳಲ್ಲಿ, ರೈತರು 1000 ಅಡಿವರೆಗೂ ಕೊಳವೆಬಾವಿ ಕೊರೆಯಲು ರೂ.20 ಲಕ್ಷಗಳನ್ನು ವೆಚ್ಚ ಮಾಡುತ್ತಿದ್ದಾರೆ. 

ಈ ಕೊಳವೆಬಾವಿ ವಿಫಲವಾದರೆ ಅಥವಾ ಕೆಲವು ವರ್ಷಗಳ ನಂತರ ಬತ್ತಿಹೋದ ಸಂದರ್ಭದಲ್ಲಿ ರೈತರು ಸಾಲಭಾಧೆಗೆ ಸಿಲುಕುತ್ತಿದ್ದಾರೆ. ಆದ್ದರಿಂದ, ರೈತರು ಕೊಳವೆಬಾವಿಯ ಬದಲಾಗಿ ಹೂಡಿಕೆಯನ್ನು ಕೃಷಿ ಭಾಗ್ಯ ಯೋಜನೆಯ ಘಟಕಗಳಲ್ಲಿ ಹೂಡಿಕೆ ಮಾಡಿ ಸುಸ್ಥಿರ ಕೃಷಿಗಾಗಿ ಬಳಸಬಹುದಾಗಿದೆ.

ಇದನ್ನೂ ಓದಿ: Gruhalakshmi camp date-ಗೃಹಲಕ್ಷ್ಮಿ ಕ್ಯಾಂಪ್ ನಿಮ್ಮ ಅರ್ಜಿ ಸರಿಪಡಿಸಲು ನಾಳೆ ಕೊನೆಯ ದಿನ!

Krishi bhagya yojana application-ಕೃಷಿ ಭಾಗ್ಯ ಯೋಜನೆಯಡಿ ಒದಗಿಸಲಾಗುವ ಸೌಲಭ್ಯಗಳ/ಘಟಕಗಳ ವಿವರಗಳು:

1. ಕ್ಷೇತ್ರ ಬದು ನಿರ್ಮಾಣ

2. ನೀರು ಸಂಗ್ರಹಣಾ ರಚನೆ (ಕೃಷಿ ಹೊಂಡ)

3. ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ

4. ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ (GI Wire Stone Fencing)

5. ಹೊಂಡದಿಂದ ನೀರು ಎತ್ತಲು ಡೀಸೆಲ್ /ಪೆಟ್ರೋಲ್/ಸೋಲಾರ್ ಪಂಪ್ ಸೆಟ್

6. ನೀರನ್ನು ಬೆಳೆಗೆ ಹಾಯಿಸಲು ಸೂಕ್ಷ್ಮ (ತುಂತುರು/ಹನಿ)ನೀರಾವರಿ

ಕೃಷಿ ಹೊಂಡದ ಅಳತೆವಾರು ಸಹಾಯಧನ ವಿವರ ಹೀಗಿದೆ(ಕೃಷಿ ಹೊಂಡ ತೆಗೆಯುವುದಕ್ಕೆ):

Krishi bhagya guideline-ಎಲ್ಲಿ ಅರ್ಜಿ ಸಲ್ಲಿಸಬೇಕು?

ಆಸಕ್ತ ರೈತರು ನಿಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರವನ್ನು ಅಗತ್ಯ ದಾಖಲಾತಿಗಳ ಸಮೇತ ಕಚೇರಿ ಸಮಯದಲ್ಲಿ ಭೇಟಿ ಮಾಡಿ ಅರ್ಜಿ ಸಲ್ಲಿಸಬವುದಾಗಿದೆ.

ಇದನ್ನೂ ಓದಿ: LPG e-KYC status- ಎಲ್.ಪಿ.ಜಿ ಗ್ಯಾಸ್ ಇ-ಕೆವೈಸಿ ಅಗಿದಿಯೋ ಇಲ್ಲವೋ ಎಂದು ಚೆಕ್ ಮಾಡುವುದು ಹೇಗೆ?

krishi honda-ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು:

  • ಅರ್ಜಿ ನಮೂನೆ(ರೈತ ಸಂಪರ್ಕ ಕೇಂದ್ರದಲ್ಲಿ ಸಿಗುತ್ತದೆ)
  • ಅರ್ಜಿದಾರರ ಅಧಾರ್ ಕಾರ್ಡ
  • ಬ್ಯಾಂಕ್ ಪಾಸ್ ಬುಕ್
  • ಪಹಣಿ/ಉತಾರ್/RTC
  • ಜಾತಿ ಪ್ರಮಾಣ ಪತ್ರ(ಅನ್ವಯಿಸಿದಲ್ಲಿ ಮಾತ್ರ)
  • ಅರ್ಜಿದಾರರ ಪೋಟೋ
  • ರೇಷನ್ ಕಾರ್ಡ ಪ್ರತಿ

ಕೃಷಿ ಹೊಂಡ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡುವ ವಿಧಾನ:

1. ಕ್ಷೇತ್ರ ಬದು ನಿರ್ಮಾಣ ಹಾಗೂ ಕೃಷಿಹೊಂಡ ಪೂರ್ಣಗೊಂಡ ನಂತರ ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ ನಿರ್ಮಿಸಿಕೊಳ್ಳುವ ಬಗ್ಗೆ ರೈತರಿಂದ ದೃಡೀಕರಣ ಪತ್ರ ಪಡೆದುಕೊಂಡು, ಕ್ಷೇತ್ರ ಬದು ಹಾಗೂ ಕೃಷಿಹೊಂಡ ಘಟಕಗಳಿಗೆ ಸಂಬಂಧಿಸಿದ ಒಟ್ಟು ಸಹಾಯಧನದ ಶೇ. 75 ರಷ್ಟು ಮೊತ್ತವನ್ನು ರೈತರ ಖಾತೆಗೆ ಜಮೆ ಮಾಡಲಾಗುತ್ತದೆ.

2. ಪಾಲಿಥೀನ್ ಹೊದಿಕೆಗೆ ರೈತರ ವಂತಿಕೆ ಪಾವತಿಸಿ, ಕೃಷಿಹೊಂಡದಲ್ಲಿ ಪಾಲಿಥೀನ್ ಹೊದಿಕೆಯ ಅಳವಡಿಕೆಯ ನಂತರ ಸರಬರಾಜು ಸಂಸ್ಥೆಗೆ ಸಹಾಯಧನವನ್ನು ಪಾವತಿ ಮಾಡಲಾಗುತ್ತದೆ.

3. ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ ನಿರ್ಮಿಸಿದ ನಂತರ ಮಾರ್ಗಸೂಚಿಯನ್ವಯ ಸಹಾಯಧನವನ್ನು ರೈತರ ಖಾತೆಗೆ ನೇರವಾಗಿ ಜಮೆ ಮಾಡುವುದು.

ಇದನ್ನೂ ಓದಿ: LPG E-KYC: ಎಲ್.ಪಿ.ಜಿ ಗ್ಯಾಸ್ ಇ-ಕೆವೈಸಿ  ಮಾಡಿಸಲು 31 ಡಿಸೆಂಬರ್ 2023 ಕೊನೆಯ ದಿನಾಂಕವಲ್ಲ!

4. ಡೀಸಲ್/ ಪೆಟ್ರೋಲ್ಸಂಪ್ ಸೆಟ್ ಮತ್ತು ಲಘು ನೀರಾವರಿ ಘಟಕಗಳಿಗೆ ಸಂಬಂಧಿಸಿದ ಸಹಾಯಧನವನ್ನು ಸರಬರಾಜು ಸಂಸ್ಥೆಗೆ ಪಾವತಿಸಲಾಗುತ್ತದೆ.

5. ಡೀಸಲ್/ ಪೆಟ್ರೋಲ್ ಪಂಪ್ ಸೆಟ್ ಬದಲಾಗಿ, ಸೋಲಾರ್ ಪಂಪ್ ಸೆಟ್ ಅನ್ನು ಇತರೆ ಇಲಾಖೆಗಳ ಚಾಲ್ತಿ ಯೋಜನೆಗಳಿಂದ ಪಡೆದು ಅಳವಡಿಸಿಕೊಂಡಿದ್ದಲ್ಲಿ ಪ್ರೋತ್ಸಾಹಧನವಾಗಿ ರೂ. 30,000/- ಗಳನ್ನು ಪ್ರತಿ ಘಟಕಕ್ಕೆ ಕೃಷಿ ಭಾಗ್ಯ ಯೋಜನೆಯಡಿ ವೆಚ್ಚ ಭರಿಸಲಾಗುತ್ತದೆ.

Karnataka agriculture department-ಈ ಯೋಜನೆಯ ಕುರಿತು ಇನ್ನು ಹೆಚ್ಚಿನ ಮಾಹಿತಿಗಾಗಿ:

ಕೃಷಿ ಭಾಗ್ಯ ಯೋಜನೆಯ 2023-24ರ ಮಾರ್ಗಸೂಚಿ: Download Now
ಕೃಷಿ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್: click here
ಕೃಷಿ ಇಲಾಖೆ ಅಧಿಕಾರಿಗಳ ಮೊಬೈಲ್ ಸಂಖ್ಯೆಗಳು: click here

ಯಾವೆಲ್ಲ ತಾಲ್ಲೂಕುಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ:

ಇದನ್ನೂ ಓದಿ: Yuva nidhi application link-ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಬಿಡುಗಡೆ!