Free equipment- ಉಚಿತವಾಗಿ ಸುಧಾರಿತ ಉಪಕರಣಗಳನ್ನು ಪಡೆಯಲು ಕರಕುಶಲ ಕರ್ಮಿಗಳಿಂದ ಅರ್ಜಿ ಆಹ್ವಾನ!
Free equipment yojana: ಗ್ರಾಮೀಣ ಪ್ರದೇಶದ ಬಡಗಿತನ, ಗೌಂಡಿ ಕ್ಷೌರಿಕ ಮತ್ತು ಧೋಬಿ ವೃತ್ತಿಯ ಕುಶಲಕರ್ಮಿಗಳಿಂದ ಉಚಿತವಾಗಿ ಸುಧಾರಿತ ಉಪಕರಣಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಗ್ರಾಮೀಣ ಪ್ರದೇಶದ ಬಡಗಿತನ, ಗೌಂಡಿ ಕ್ಷೌರಿಕ ಮತ್ತು ಧೋಬಿ ವೃತ್ತಿಯ ಕುಶಲಕರ್ಮಿಗಳಿಂದ ಉಚಿತವಾಗಿ ಸುಧಾರಿತ ಉಪಕರಣಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗ, ಜಿಲ್ಲಾ ಪಂಚಾಯತ ವಿಜಯಪುರ ಕಛೇರಿಯಿಂದ 2023- 24 ನೇ ಸಾಲಿಗೆ, ಜಿಲ್ಲಾ ವಲಯ ಯೋಜನೆಯಡಿ 18 ರಿಂದ 55 ವರ್ಷ ವಯೋಮಿತಿಯ ಅರ್ಹ ಗ್ರಾಮೀಣ ಪ್ರದೇಶದ ಬಡಗಿತನ, ಗೌಂಡಿ ಕ್ಷೌರಿಕ ಮತ್ತು ಧೋಬಿ ವೃತ್ತಿಯ ಕುಶಲಕರ್ಮಿಗಳಿಂದ ಉಚಿತವಾಗಿ ಉಪಕರಣಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು.
ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆಯಬಹುದಾಗಿದ್ದು, ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ನಮೂನೆ ಡೌನ್ಲೋಡ್ ಮಾಡುವ ವಿಧಾನ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: Panchayat raj job- 51 ಪಂಚಾಯತ್ ರಾಜ್ ಫೆಲೋಶಿಪ್ ಹುದ್ದೆಗೆ ಅರ್ಜಿ ಆಹ್ವಾನ! ತಿಂಗಳಿಗೆ 61,500/- ವೇತನ.
Free equipment application- ಎಲ್ಲಿ ಅರ್ಜಿ ಸಲ್ಲಿಸಬೇಕು?
ಆಸಕ್ತ ಅರ್ಜಿದಾರರರು ಈ Application download link ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಭೇಟಿ ಮಾಡಿ ಮೂಲಕ ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳುವುದು ಇಲ್ಲವೆ 'ಕಛೇರಿಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದುಕೊಳ್ಳುವುದು. ಭರ್ತಿ ಮಾಡಿದ ಅರ್ಜಿಯನ್ನು ಅವಶ್ಯಕ ದಾಕಲಾತಿಗಳನ್ನು ಲಗತ್ತಿಸಿ ಈ ಕಛೇರಿಗೆ ಖುದ್ದಾಗಿ ಇಲ್ಲವೇ ಪೋಸ್ಟ್ ಮುಖಾಂತರ ಸಲ್ಲಿಸಬಹುದಾಗಿದೆ.
office address- ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ಕಛೇರಿ ವಿಳಾಸ :
ಉಪನಿರ್ದೇಶಕರ ರವರ ಕಛೇರಿ,
ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗ.
ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ ಸ್ಟೇಶನ್ ಬ್ಯಾಕ್ ರೋಡ, ಶಿಕಾರಖಾನೆ ವಿಜಯಪುರ-586104.
ಇದನ್ನೂ ಓದಿ: Swavalambi Yojana application-ಸ್ವಾವಲಂಬಿ ಯೋಜನೆಯಡಿ 1.00 ಲಕ್ಷದವರೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!
Required documents for application- ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು:
1) ಇತ್ತೀಚಿನ ಭಾವಚಿತ್ರ.
2) ಅರ್ಜಿದಾರರ ಆಧಾರ್ ಕಾರ್ಡ ಪ್ರತಿ.
3) ತಹಶೀಲ್ದಾರರಿಂದ ಪಡೆದ ಜಾತಿ ಪ್ರಮಾಣ ಪತ್ರ.(ಪ.ಜಾತಿ ಮತ್ತಿ ಪ.ಪಂಗಡದ ಅಭ್ಯರ್ಥಿಗಳಿಗೆ ಮಾತ್ರ)
4) ಪಡಿತರ ಚೀಟಿ/ರೇಶನ್ ಕಾರ್ಡ್
5) ಗ್ರಾಮ ಪಂಚಾಯತಿಯ ವೃತ್ತಿ ಧೃಢೀಕರಣ ಪತ್ರ.
ಇದನ್ನೂ ಓದಿ: Parihara list-ಬೆಳೆ ಪರಿಹಾರದ ಹಣ ಜಮಾ ಅಗಿರುವ ಫಲಾನುಭವಿ ರೈತರ ಪಟ್ಟಿ ಬಿಡುಗಡೆ!
Last date for application- ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 01-02-2024 ಸಾಯಂಕಾಲ 5.30.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಛೇರಿಗೆ ದೂರವಾಣಿ ಸಂಖ್ಯೆ : 08352-254851, ಕೈಗಾರಿಕಾ ವಿಸ್ತರಣಾಧಿಕಾರಿಗಳು ವಿಜಯಪುರ/ಸಿಂದಗಿ/ಇಂಡಿ ಮೊಬೈಲ್ ಸಂಖ್ಯೆ : 9972162222 ಮತ್ತು ಮುದ್ದೇಬಿಹಾಳ/ಬಾಗೇವಾಡಿ ಮೊಬೈಲ್ ಸಂಖ್ಯೆ: 9945779798 ಸಂಪರ್ಕಿಸಬುಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.