Nigamada Yojane-ಸ್ವಯಂ ಉದ್ಯೋಗ ನೇರಸಾಲ, ಸ್ವಾವಲಂಬಿ ಸಾರಥಿ ಯೋಜನೆ ಸೇರಿ ಇತರೆ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ!

ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ನಿಗಮದ ಅರ್ಜಿಗಳನ್ನು ಸಲ್ಲಿಸಲು ಈ ಮೊದಲು ಇದ್ದ ಕೊನೆಯ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದ್ದು ಆಸಕ್ತ ಅರ್ಜಿದಾರರು ಕೊನೆಯ ದಿನಾಂಕದ ಒಳಗಾಗಿ ಅಗತ್ಯ ದಾಖಲಾತಿಗಳ ಸಮೇತ ಅರ್ಜಿ ಸಲ್ಲಿಸಿ ಈ ಕೆಳಗಿನ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಬವುದು.

ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ನಿಗಮದ ಅರ್ಜಿಗಳನ್ನು ಸಲ್ಲಿಸಲು ಈ ಮೊದಲು ಇದ್ದ ಕೊನೆಯ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದ್ದು ಆಸಕ್ತ ಅರ್ಜಿದಾರರು ಕೊನೆಯ ದಿನಾಂಕದ ಒಳಗಾಗಿ ಅಗತ್ಯ ದಾಖಲಾತಿಗಳ ಸಮೇತ ಅರ್ಜಿ ಸಲ್ಲಿಸಿ ಈ ಕೆಳಗಿನ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಬವುದು.

ಯಾವೆಲ್ಲ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ?

1)ಸ್ವಯಂ ಉದ್ಯೋಗ ನೇರಸಾಲ ಯೋಜನೆ(1.00 ಲಕ್ಷಗಳ ಸಹಾಯಧನ):     
     
ನಿರುದ್ಯೋಗ ಯುವಕ/ಯುವತಿಯರು ಸ್ವಯಂ ಉದ್ಯೋಗ ಕೈಗೊಳ್ಳಲು ಸದರಿ ಯೋಜನೆಯ 50% ರಷ್ಟು ಗುರಿಯಲ್ಲಿ ಹೈನುಗಾರಿಕೆ  ಮತ್ತು ಉಳಿದ 50%ರಷ್ಟು ಗುರಿಯಲ್ಲಿ ತರಕಾರಿ, ಹಣ್ಣುಹಂಪಲು, ಮೀನು-ಮಾಂಸ ಮಾರಾಟ, ಕುರಿ/ಹಂದಿ/ಮೊಲ ಸಾಕಾಣಿಕೆ ಮುಂತಾದ ಕಿರು ಆರ್ಥಿಕ ಚಟುವಟಿಕೆಗಳಿಗಾಗಿ ಮಳಿಗೆ /ತಳ್ಳುಗಾಡಿ ದುಡಿಮೆ ಬಂಡವಾಳ ಸೇರಿದಂತೆ ಇತ್ಯಾದಿ ಉದ್ದೇಶದ ಸೌಲಭ್ಯಗಳಿಗಾಗಿ ಘಟಕ ವೆಚ್ಚ ರೂ.1,00,000/-ದಲ್ಲಿ ಶೇ.5೦ರಷ್ಟು ಸಾಲ ಮತ್ತು ಶೇ.5೦ರಷ್ಟು ಸಹಾಯಧನದ ಮೂಲಕ ಅನುಷ್ಟಾನಗೊಳಿಸುವುದು (ಸಹಾಯಧನ ರೂ.5೦೦೦೦/- ಮತ್ತು ಸಾಲ ರೂ.5೦೦೦೦/-ಗಳು) ಫಲಾನುಭವಿಗಳಿಗೆ 2 ಕಂತುಗಳಲ್ಲಿ ಪಾವತಿಸಲಾಗುವುದು. ಸಾಲವನ್ನು ನಿಗಮದ ಮೂಲಕ ಶೇ4 ರಷ್ಟು ಬಡ್ಡಿ ದರದಲ್ಲಿ ವಿಧಿಸಲಾಗುತ್ತದೆ.

ಇದನ್ನೂ ಓದಿ: Agriculture mechanization subsidy: ಕೃಷಿ ಇಲಾಖೆಯಿಂದ ಶೇ 50 ರಷ್ಟು ಸಹಾಯಧನದಲ್ಲಿ ಹಿಟ್ಟಿನ ಗಿರಣಿ, ರೋಟಿ ಮಷೀನ್, ಎಣ್ಣೆಗಾನ ಮಷೀನ್ ಪಡೆಯಲು ಅರ್ಜಿ ಆಹ್ವಾನ!

2) ಸ್ವಯಂ ಉದ್ಯೋಗ ನೇರಸಾಲ ಯೋಜನೆ(2.00 ಲಕ್ಷಗಳ ಸಹಾಯಧನ):

ನಿರುದ್ಯೋಗಿ ಪುರುಷ ಮತ್ತು ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು ಗರಿಷ್ಟ ರೂ.2.00 ಲಕ್ಷಗಳವರೆಗೆ ಸಹಾಯಧನವನ್ನು ಮಂಜೂರು ಮಾಡಿ ಬ್ಯಾಂಕ್‌ ಸಹಯೋಗದೊಂದಿಗೆ ಯೋಜನೆಯನ್ನು ಅನುಷ್ಟಾನಗೊಳಿಸಲಾಗುವುದು. ಸಹಾಯದ ಗರಿಷ್ಠ ಮೊತ್ತವು ಘಟಕ ವೆಚ್ಚದ 70% ಆಗಿರುತ್ತದೆ, ಗರಿಷ್ಠ ರೂ.2.00 ಲಕ್ಷಗಳು ಮತ್ತು ಘಟಕ ವೆಚ್ಚದ ಉಳಿದ ಭಾಗವನ್ನು ಸಾಲವಾಗಿ ಬ್ಯಾಂಕ್‌ಗಳು ಮಂಜೂರು ಮಾಡುತ್ತವೆ.
 
3) ಸ್ವಾವಲಂಬಿ ಸಾರಥಿ ಯೋಜನೆ(4.0 ಲಕ್ಷಗಳ ಸಹಾಯಧನ):-

ಈ ಯೋಜನೆಯಡಿ ಯುವಕ/ಯುವತಿಯರಲ್ಲಿ ಸ್ವ-ಉದ್ಯೋಗವನ್ನು ಉತ್ತೇಜಿಸಲು ಸರಕು ಸಾಗಾಣಿಕೆ ವಾಹನ ಖರೀದಿ ಉದ್ದೇಶದ ಜೊತೆಗೆ ಸಾರಿಗೆ ವಾಹನ, ಟ್ರಾಕ್ಟ್‌ರ್ ಹಾಗೂ ಇತರೆ ವ್ಯಾಪಾರ ಉದ್ದೇಶಗಳಿಗೆ ಘಟಕ ವೆಚ್ಚದಲ್ಲಿ ಶೇ.70 ರಷ್ಟು ಅಥವಾ ಗರಿಷ್ಟ ರೂ.4.00 ಲಕ್ಷಗಳ ಸಹಾಯಧನವಾಗಿದ್ದು, ಉಳಿದ ಮೊತ್ತ ಬ್ಯಾಂಕ್ ಸಾಲವಾಗಿರುತ್ತದೆ. 

ಇದನ್ನೂ ಓದಿ: New ration card-ರೇಷನ್ ಕಾರ್ಡ ತಿದ್ದುಪಡಿ ಮತ್ತು ಹೊಸ ರೇಷನ್ ಕಾರ್ಡಗೆ ಅರ್ಜಿ ಸಲ್ಲಿಸಲು ಅವಕಾಶ!

4)ಪ್ರೇರಣಾ(ಮೈಕ್ರೋ ಕ್ರೆಡಿಟ್ ಫೈನಾನ್ಸ್) ಯೋಜನೆ:                                                                                                                 
   
ನಿಗಮವು ಪರಿಶಿಷ್ಟ ಪಂಗಡಕ್ಕೆ ಸೇರಿದ ಮಹಿಳೆಯರು ರಚಿಸಿಕೊಂಡಿರುವ ನೋಂದಾಯಿತ ಸ್ವಸಹಾಯ ಸಂಘದ ಸದಸ್ಯರುಗಳ ಆರ್ಥಿಕ ಸ್ವಾವಲಂಬನೆ ಮತ್ತು ಸಬಲೀಕರಣ ಉದ್ದೇಶಕ್ಕಾಗಿ ಪ್ರೇರಣಾ ಯೋಜನೆಯನ್ನು ಅನುಷ್ಟಾನಗೊಳಿಸುತ್ತಿದೆ.  

ಗರಿಷ್ಟ 10 ಪರಿಶಿಷ್ಟ ಪಂಗಡದ ಮಹಿಳಾ ಸದಸ್ಯರನ್ನು ಹೊಂದಿರುವ ನೋಂದಾಯಿತ ಸ್ವಸಹಾಯ ಸಂಘಕ್ಕೆ ಪ್ರತಿ ಸದಸ್ಯರಿಗೆ ರೂ.15,000/- ಸಹಾಯಧನ ಮತ್ತು ರೂ.10,000/- ಸಾಲ, ಒಟ್ಟು ರೂ.25,000/- ಗಳಂತೆ ಒಂದು ಸಂಘಕ್ಕೆ ಗರಿಷ್ಟ  ರೂ.2.50ಲಕ್ಷ ಅನುದಾನವನ್ನು ಒದಗಿಸಲಾಗುವುದು.

ಸಾಲವನ್ನು ನಿಗಮದಿಂದಲೇ ನೀಡಲಾಗುತ್ತಿದ್ದು, ಇದಕ್ಕೆ ವಾರ್ಷಿಕ ಶೇ.4% ದರದಲ್ಲಿ ಬಡ್ಡಿ ವಿಧಿಸಲಾಗುತ್ತಿದ್ದು, 36 ಮಾಸಿಕ ಸಮ ಕಂತುಗಳಲ್ಲಿ ಸಾಲವನ್ನು ನಿಗಮಕ್ಕೆ ಮರುಪಾವತಿ ಮಾಡಬೇಕಾಗಿರುತ್ತದೆ.

ನಿಯಮಗಳು:

  • ಅರ್ಜಿದಾರರು ಆಯ್ಕೆ ಸಮಿತಿಯಿಂದ ಆಯ್ಕೆಯಾಗಿರಬೇಕು.
  • ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದವರಿಗೆ ರೂ.1.50 ಲಕ್ಷ ಹಾಗೂ ನಗರ ಪ್ರದೇಶದವರಿಗೆ ರೂ.2.00 ಲಕ್ಷಗಳ ಮಿತಿಯೊಳಗಿರಬೇಕು.
  • ಅರ್ಜಿದಾರರು 21 ವರ್ಷದಿಂದ 50 ವರ್ಷದವರೆಗಿನ ವಯೋಮಾನದವರಾಗಿರಬೇಕು.
  • ಉದ್ದೇಶಿತ ವ್ಯಾಪಾರ /ಚಟುವಟಿಕೆ ಆಧಾರದ ಮೇಲೆ ಸಾಲ/ಸಹಾಯಧನ ಮಂಜೂರು ಮಾಡಲಾಗುವುದು.
  • ಮಂಜೂರಾತಿ ಪಡೆದ ಫಲಾನುಭವಿಯು ಅನರ್ಹರೆಂದು ಕಂಡು ಬಂದಲ್ಲಿ ಮಂಜೂರಾತಿಯನ್ನು ಯಾವುದೇ ಹಂತದಲ್ಲಿ ರದ್ದುಪಡಿಸಲಾಗುತ್ತದೆ.
    ಸಹಾಯಧನ ಮತ್ತು ಸಾಲವನ್ನು ನೇರವಾಗಿ ಫಲಾನುಭವಿಗಳಿಗೆ ಬಿಡುಗಡೆ ಮಾಡಲಾಗುವುದು.

ಇದನ್ನೂ ಓದಿ: Ujjwala Yojana-2023: ಉಜ್ವಲ ಯೋಜನೆಯಡಿ ಗ್ಯಾಸ್ ಸಬ್ಸಿಡಿ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಈ ಮೇಲಿನ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಈ ಮೊದಲು 30 ನವೆಂಬರ್ ಕೊನೆಯ ದಿನಾಂಕ ಎಂದು ನಿಗದಿಪಡಿಸಲಾಗಿತ್ತು ಈಗ 15 ಡಿಸೆಂಬರ್ 2023 ಕೊನೆಯ ದಿನಾಂಕ ಎಂದು ಹೊಸ ಪ್ರಕಟಣೆ ಹೊರಡಿಸಲಾಗಿದೆ. ಅರ್ಹ ಅರ್ಜಿದಾರರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಲಿ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಬವುದು. 

ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು:

  • ಅರ್ಜಿ
  • ಭಾವಚಿತ್ರ
  • ಜಾತಿ ಪತ್ರ (ಆರ್.ಡಿ. ಸಂಖ್ಯೆ ಹೊಂದಿರಬೇಕು)
  • ಆಧಾಯ ಪತ್ರ (ಆರ್.ಡಿ. ಸಂಖ್ಯೆ ಹೊಂದಿರಬೇಕು)
  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್‍ಬುಕ್
  • ಅಗತ್ಯವಿರುವ ಇತರೆ ದಾಖಲಾತಿಗಳು
  • ವಾಹನ ಪರವಾನಿಗೆ (ಸ್ವಾವಲಂಬಿ ಸಾರಥಿ ಯೋಜನೆ)

ಎಲ್ಲಿ ಅರ್ಜಿ ಸಲ್ಲಿಸಬೇಕು?

ಅಗತ್ಯ ದಾಖಲಾತಿಗಳ ಸಮೇತ ಗ್ರಾಮೀಣ ಭಾಗದ ಅರ್ಜಿದಾರರು ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರ ಭೇಟಿ ಮಾಡಿ ಅರ್ಜಿ ಸಲ್ಲಿಸಬವುದು ಇದಲ್ಲದೇ ಕರ್ನಾಟಕ ಒನ್ , ಬೆಂಗಳೂರು ಒನ್ ಕಂಪ್ಯೂಟರ್ ಸೆಂಟರ್ ನಲ್ಲಿ ಅರ್ಜಿ ಸಲ್ಲಿಸಬವುದು.

ಇದನ್ನೂ ಓದಿ: Parihara list-ಬರ ಪರಿಹಾರ ಪಡೆಯಲು ಅರ್ಹ ರೈತರ ಪಟ್ಟಿ ಬಿಡುಗಡೆ! ಈ ಲಿಂಕ್ ಕ್ಲಿಕ್ ಮಾಡಿ ನಿಮ್ಮ ಹೆಸರಿದ್ಯಾ? ಚೆಕ್ ಮಾಡಿ.