Vidhya nidhi-ವಿದ್ಯಾನಿಧಿ ಯೋಜನೆಯಡಿ ಪಿಯುಸಿ ವಿದ್ಯಾರ್ಥಿಗಳಿಗೆ ರೂ 2,500 ವಿದ್ಯಾರ್ಥಿವೇತನಕ್ಕೆ ಅರ್ಜಿ!

September 24, 2024 | Siddesh
Vidhya nidhi-ವಿದ್ಯಾನಿಧಿ ಯೋಜನೆಯಡಿ ಪಿಯುಸಿ ವಿದ್ಯಾರ್ಥಿಗಳಿಗೆ ರೂ 2,500 ವಿದ್ಯಾರ್ಥಿವೇತನಕ್ಕೆ ಅರ್ಜಿ!
Share Now:

ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನ ಒದಗಿಸಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ(Vidhya nidhi yojane) ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸುವ ವಿಧಾನ ಹೇಗಿರುತ್ತದೆ? ಇತರೆ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ವಿದ್ಯಾನಿಧಿ ಯೋಜನೆಯಡಿ ಪಿಯುಸಿ, ಡಿಪ್ಲೋಮಾ, ಪದವಿ, ಐಟಿಐ  ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಯೋಜನೆಯಡಿ ಅರ್ಜಿ ಸಲ್ಲಿಸಿ ರೂ 2,500/- ರಿಂದ ರೂ 5,500/- ರ ವರೆಗೆ ವಿದ್ಯಾರ್ಥಿ ವೇತನ ಪಡೆದುಕೊಳ್ಳಬಹುದು.

Vidyanidhi Documents-ಅರ್ಜಿ ಸಲ್ಲಿಸಲು ಒದಗಿಸಬೇಕಾದ ದಾಖಲೆಗಳು:

1) ಅರ್ಜಿದಾರ ಅಭ್ಯರ್ಥಿಯ ಆಧಾರ್ ಕಾರ್ಡ ಪ್ರತಿ.
2) ರೇಷನ್ ಕಾರ್ಡ ಪ್ರತಿ.
3) ಬ್ಯಾಡ್ಜ್ ಇರುವ ವಾಹನದ ಡ್ರೈವಿಂಗ್ ಲೈಸೆನ್ಸ್
4) ಅಂಕಪಟ್ಟಿ.

ಇದನ್ನೂ ಓದಿ: Canara Bank Recruitment-2024: ಕೆನರಾ ಬ್ಯಾಂಕ್ ನಲ್ಲಿ 3000 ಹುದ್ದೆಗಳ ನೇಮಕಾತಿ!

ಇದನ್ನೂ ಓದಿ: Krishi pandita prashasti-2024: ಕೃಷಿ ಪಂಡಿತ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ!

How to Apply for vidyanidhi scholarship- ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳ ಸಮೇತ ನಿಮ್ಮ ಹತ್ತಿರದ ಗ್ರಾಮ ಒನ್ , ಕರ್ನಾಟಕ ಒನ್, ಬೆಂಗಳೂರು ಒನ್, ಕಂಪ್ಯೂಟರ್ ಸೆಂಟರ್ ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು ಅಥವಾ ಸೇವಾ ಸಿಂಧು ಪೋರ್ಟಲ್ ಪ್ರವೇಶ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

Who can apply for vidyanidhi scholarship-ಅರ್ಜಿ ಸಲ್ಲಿಸಲು ಅರ್ಹರು:

1) ಆಟೋ ಹಾಗೂ ಹಳದಿ ಬೋರ್ಡ್ ಟ್ಯಾಕ್ಸಿಗಳ ಚಾಲಕರ ಮಕ್ಕಳು ಈ ಯೋಜನೆಯಡಿ ಅರ್ಜಿ ಸಲ್ಲಿಸಿ ವಿದ್ಯಾರ್ಥಿ ವೇತನ ಪಡೆಯಬಹುದು.

2) ಪಿಯುಸಿ, ಡಿಪ್ಲೋಮಾ, ಪದವಿ, ಐಟಿಐ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: Krishi pumpset Adhar link- ಕೃಷಿ ಪಂಪ್ ಸೆಟ್ ಗೆ ಆಧಾರ್ ಲಿಂಕ್ ಮಹತ್ವದ ಪ್ರಕಟಣೆ!

scholarship amount- ವಿದ್ಯಾರ್ಥಿ ವೇತನದ ವಿವರ:

A) ಪಿಯುಸಿ/ಐಟಿಐ/ಡಿಪ್ಲೋಮಾ: ವಿದ್ಯಾರ್ಥಿಗಳಿಗೆ- ರೂ 2,500 ವಿದ್ಯಾರ್ಥಿನಿಯರಿಗೆ- ರೂ 3,000

B) ಪದವಿ(B.com,BBM, BCA,Bsc,BA ಇತರೆ ಪದವೀದರರು): ವಿದ್ಯಾರ್ಥಿಗಳಿಗೆ- ರೂ 5,000 ವಿದ್ಯಾರ್ಥಿನಿಯರಿಗೆ- ರೂ 5,500 

ಇದನ್ನೂ ಓದಿ: AO and AAO Notification-2024: ಕೃಷಿ ಇಲಾಖೆಯಲ್ಲಿ ಭರ್ಜರಿ ನೇಮಕಾತಿ!

Online application link-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ಅಭ್ಯರ್ಥಿಗಳು ಈ ಕೆಳಗೆ ವಿವರಿಸಿರುವ ವಿಧಾನವನ್ನು ಅನುಸರಿಸಿ ನಿಮ್ಮ ಮೊಬೈಲ್ ನಲ್ಲೇ ಸೇವಾ ಸಿಂಧು ಪೋರ್ಟಲ್ ಭೇಟಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

Step-1: ಮೊದಲಿಗೆ ಈ Apply Now ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಸೇವಾ ಸಿಂಧು ಪೋರ್ಟಲ್ ಅನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Diploma agriculture-ಕೃಷಿ ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!

Step-2: ಇದಾದ ಬಳಿಕ ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ ಮೊಬೈಲ್ ನಂಬರ್ ಹಾಕಿ ನೋಂದಣಿಯನ್ನು ಮಾಡಿಕೊಳ್ಳಬೇಕು.

Step-3: ನೋಂದಣಿಯನ್ನು ಮಾಡಿಕೊಂಡು User name ಮತ್ತು password ಅನ್ನು ನಮೂದಿಸಿ Login ಮಾಡಿಕೊಂಡು ಅಗತ್ಯ ವಿವರವನ್ನು ಭರ್ತಿ ಕೊನೆಯಲ್ಲಿ Submit ಬಟನ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಅರ್ಜಿ ಯಶಸ್ವಿಯಾಗಿ ಸಲ್ಲಿಕೆಯಾಗುತ್ತದೆ.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: