Bele parihara news- 56 ಸಾವಿರ ಹೆಕ್ಟೇರ್ ಬೆಳೆ ಹಾನಿ ಈ ಪಟ್ಟಿಯಲ್ಲಿರುವವರಿಗೆ 15 ದಿನದಲ್ಲಿ ಬೆಳೆ ಹಾನಿ ಪರಿಹಾರ: ಸಚಿವ ಕೃಷ್ಣ ಬೈರೇಗೌಡ

October 27, 2024 | Siddesh
Bele parihara news- 56 ಸಾವಿರ ಹೆಕ್ಟೇರ್ ಬೆಳೆ ಹಾನಿ ಈ ಪಟ್ಟಿಯಲ್ಲಿರುವವರಿಗೆ 15 ದಿನದಲ್ಲಿ ಬೆಳೆ ಹಾನಿ ಪರಿಹಾರ: ಸಚಿವ ಕೃಷ್ಣ ಬೈರೇಗೌಡ
Share Now:

ರಾಜ್ಯಾದ್ಯಂತ ಅಕ್ಟೋಬರ್ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬಂದ ಕಾರಣ ರಾಜ್ಯ ಬಹುತೇಕ ಜಿಲ್ಲೆಗಳಲ್ಲಿ(Bele parihara news) ಕಟಾವಿಗೆ ಬಂದ ಬೆಳೆಯು ಹಾನಿಯಾಗಿದ್ದು ಬೆಳೆ ಹಾನಿಯಿಂದ ನಷ್ಟವನ್ನು ಅನುಭವಿಸಿದ ಅರ್ಹ ಫಲಾನುಭವಿ ರೈತರಿಗೆ ಬೆಳೆ ಪರಿಹಾರವನ್ನು ನೀಡುವ ಕುರಿತು ಕಂದಾಯ ಸಚಿವ ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದೆ.

ರಾಜ್ಯದಲ್ಲಿ ಎಷ್ಟು ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ? ಬೆಳೆ ಹಾನಿಯಾಗಿದ್ದರೆ ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಇತರೆ ಉಪಯುಕ್ತ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Land Mutation-ಉಚಿತವಾಗಿ ನಿಮ್ಮ ಜಮೀನಿನ ಮ್ಯುಟೇಶನ್ ವಿವರವನ್ನು ನೋಡಲು ವೆಬ್ಸೈಟ್ ಬಿಡುಗಡೆ!

Bele parihara-2024: 15 ದಿನದಲ್ಲಿ ಬೆಳೆ ಹಾನಿ ಪರಿಹಾರ: ಸಚಿವ ಕೃಷ್ಣ ಬೈರೇಗೌಡ:

ರಾಜ್ಯದಲ್ಲಿ ಅಕ್ಟೋಬರ್ ತಿಂಗಳಲ್ಲಿ ಸರಾಸರಿ 10.4 ಸೆಂ.ಮೀ. ವಾಡಿಕೆ ಮಳೆ ಆಗಬೇಕಿತ್ತು. ಆದರೆ 16.6 ಸೆಂ.ಮೀ. ಮಳೆ ಸುರಿದಿದೆ. ಅಂದಾಜು 56,993 ಹೆಕ್ಟೇ‌ರ್ ಪ್ರದೇಶದಲ್ಲಿನ ಬೆಳೆ ಹಾನಿಗೀಡಾಗಿದೆ. ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಜಂಟಿ ಸಮೀಕ್ಷೆ ಇನ್ನು 3 - 4 ದಿನಗಳಲ್ಲಿ ಪೂರ್ಣಗೊಳ್ಳಲಿದ್ದು, 15 ದಿನಗಳಲ್ಲಿ ಪರಿಹಾರ ವಿತರಿಸುತ್ತೇವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Bele hani- 56,993 ಹೆಕ್ಟೇ‌ರ್ ಪ್ರದೇಶದಲ್ಲಿನ ಬೆಳೆ ಹಾನಿ:

ಅಕ್ಟೋಬರ್ ತಿಂಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಿದ್ದ ಅಧಿಕ ಮಳೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ ಎರಡನ್ನು ಸೇರಿ ಸರಿ ಸುಮಾರು 56,993 ಹೆಕ್ಟೇ‌ರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದು ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Ration card list-2024: 14 ಲಕ್ಷಕ್ಕೂ ಅಧಿಕ ಅನರ್ಹ ರೇಷನ್ ಕಾರ್ಡ ಪತ್ತೆ! ಇಲ್ಲಿದೆ ರದ್ದಾದ ರೇಷನ್ ಕಾರ್ಡ ಪಟ್ಟಿ!

Bele parihara

One hectare is equal to- 1 ಹೆಕ್ಟೇರ್ ಎಂದರೆ ಎಷ್ಟು ಎಕರೆ?

ಒಂದು ಹೆಕ್ಟೇರ್ ಪ್ರದೇಶ ಅಂದರೆ 2.5 ಎಕರೆ ಜಮೀನು ಎಂದು ಅರ್ಥ.

How to apply For bele parihara-ಬೆಳೆ ಹಾನಿ ಪರಿಹಾರ ಪಡೆಯಲು ಎಲ್ಲಿ ಅರ್ಜಿ ಸಲ್ಲಿಸಬೇಕು?

ಒಂದೊಮ್ಮೆ ಅಕ್ಟೋಬರ್ ತಿಂಗಳಿನಲ್ಲಿ ಬಂದ ಮಳೆಯಿಂದ ನಿಮ್ಮ ಜಮೀನಿನ ಬೆಳೆ ಹಾನಿಯಾಗಿದ್ದರೆ ಅರ್ಜಿದಾರರ ಆಧಾರ್ ಕಾರ್ಡ, ಬ್ಯಾಂಕ್ ಪಾಸ್ ಬುಕ್, ಹಾನಿಯಾದ ಜಮೀನಿನ ಪಹಣಿ/ಊತಾರ್/RTC ಅನ್ನು ತೆಗೆದುಕೊಂಡು ನಿಮ್ಮ ರೈತ ಸಂಪರ್ಕ ಕೇಂದ್ರ ಅಥವಾ ಕಂದಾಯ ಇಲಾಖೆಯ ಗ್ರಾಮ ಚಾವಡಿಯಲ್ಲಿರುವ ಗ್ರಾಮ ಲೆಕ್ಕಾಧಿಕಾರಿ(VA) ರವರನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಿ.

NDRF ಮಾರ್ಗಸೂಚಿಯನ್ವ ನಿಗದಿಪಡಿಸಿರುವ ಪ್ರತಿ ಎಕರೆಗೆ ಬೆಳೆ ಹಾನಿ ಪರಿಹಾರದ ಮೊತ್ತ(ಪ್ರತಿ ಹೆಕ್ಟೇರ್ ಗೆ):

1) ಮಳೆಯಾಶ್ರಿತ ಬೆಳೆ- ರೂ 8,500/-
2) ನೀರಾವರಿ ಬೆಳೆ- ರೂ 17,000/-
3) ಬಹುವಾರ್ಷಿಕ ಬೆಳೆ- ರೂ 22,500/-

ಇದನ್ನೂ ಓದಿ: Google Pay, Phone pe ನಲ್ಲಿ ತಪ್ಪಾಗಿ ಬೇರೆಯವರಿಗೆ ಹಣ ಕಳಿಸಿದರೆ! ವಾಪಸ್ ಪಡೆಯುವುದು ಹೇಗೆ!

Online apply method for bele parihara- ಆನ್ಲೈನ್ ನಲ್ಲಿ ಬೆಳೆ ಹಾನಿ ಪರಿಹಾರದ ಅರ್ಜಿಯನ್ನು ಚೆಕ್ ಮಾಡಿವ ವಿಧಾನ:

ಒಮ್ಮೆ ಬೆಳೆ ಹಾನಿ ಪರಿಹಾರದ ಅರ್ಜಿಯನ್ನು ಸಂಭಂದಪಟ್ಟ ಇಲಾಖೆ ಕಛೇರಿಗೆ ಭೇಟಿ ಮಾಡಿ ಸಲ್ಲಿಸಿದ ನಂತರ ರೈತರು ಈ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ನಿಮ್ಮ ಅರ್ಜಿ ಯಾವ ಹಂತದಲ್ಲಿದೆ? ಪರಿಹಾರದ ಹಣ ಜಮಾ ಅಗಿದ್ದರೆ ಅದರ ಸ್ಥಿತಿಯನ್ನು ಮನೆಯಲ್ಲೇ ಕುಳಿತು ಚೆಕ್ ಮಾಡಿಕೊಳ್ಳಬಹುದು.

Step-1: ಮೊದಲಿಗೆ ಇಲ್ಲಿ ಕ್ಲಿಕ್ Bele parihara status ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು.

Step-2: ಇದಾದ ಬಳಿಕ ಇಲ್ಲಿ "Citizen Login" ಬಟನ್ ಮೇಲೆ ಕ್ಲಿಕ್ ಮಾಡಿ ಅಗತ್ಯ ವಿವರವನ್ನು ಭರ್ತಿ ಮಾಡಿ ಮುಂದುವರೆಯಬೇಕು.

Step-3: ಬಳಿಕ ಇಲ್ಲಿ ಅರ್ಜಿದಾರರ ಮೊಬೈಲ್ ನಂಬರ್ ಅಥವಾ ಆಧಾರ್ ಕಾರ್ಡ ನಂಬರ್ ಅನ್ನು ನಮೂದಿಸಿ ನಿಮ್ಮ ಬೆಳೆ ಪರಿಹಾರದ ಅರ್ಜಿಯ ವಿವರವನ್ನು ನೋಡಬಹುದು.

ಗಮನಿಸಿ: ಪ್ರಸ್ತುತ ಈ ವೆಬ್ಸೈಟ್ ಅನ್ನು ಲಾಕ್ ಮಾಡಲಾಗಿದ್ದು ಒಮ್ಮೆ ಸಂಭಂದಪಟ್ಟ ಇಲಾಖೆಯ ಅಧಿಕಾರಿಗಳು ಆನ್ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಿದ ಬಳಿಕ ಈ ಪೇಜ್ ತೆರೆದುಕೊಳ್ಳುತ್ತದೆ.

ಇದನ್ನೂ ಓದಿ: Online RTC-ಉಚಿತವಾಗಿ ನಿಮ್ಮ ಮೊಬೈಲ್ ನಲ್ಲೇ ಪಹಣಿ ನೋಡಿ! ಇಲ್ಲಿದೆ ವೆಬ್ಸೈಟ್ ಲಿಂಕ್!

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: