Copra msp price- ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿಗೆ ಪುನಃ ನೋಂದಣಿಗೆ ಅವಕಾಶ! ಎಷ್ಟು ದಿನ ಅವಕಾಶ ನೀಡಲಾಗಿದೆ?

Facebook
Twitter
Telegram
WhatsApp

ಕೃಷಿ ಮಾರಾಟ ಇಲಾಖೆಯ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿವತಿಯಿಂದ ಬೆಂಬಲ ಬೆಲೆಯಲ್ಲಿ(Copra msp price) ಉಂಡೆ ಕೊಬ್ಬರಿಯನ್ನು ಖರೀದಿಸಲು ರೈತರ ನೋಂದಣಿಗೆ ಅವಕಾಶ ಮಾಡಿಕೊಡಲಾಗಿದೆ.

ಎಷ್ಟು ದಿನ ರೈತರಗೆ  ನೋಂದಣಿಗೆ ಅವಕಾಶ ನೀಡಲಾಗಿದೆ? ಯಾವೆಲ್ಲ ಜಿಲ್ಲೆಗಳಲ್ಲಿ ಅವಕಾಶ? ಎಲ್ಲಿ ನೋಂದಣಿ ಮಾಡಿಕೊಳ್ಳಬೇಕು ಇತ್ಯಾದಿ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ಈ ಮಾಹಿತಿ ಉಪಯುಕ್ತ ಅನಿಸಿದಲ್ಲಿ ತಪ್ಪದೇ ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ ಎಲ್ಲಾ ರೈತ ಭಾಂದವರಿಗೆ ಈ ಮಾಹಿತಿ ತಿಳಿಸಲು ಸಹಕರಿಸಿ.

ಇದನ್ನೂ ಓದಿ: Bara Parihara status- ಮೊದಲ ಕಂತಿನ ಬರ ಪರಿಹಾರ ನಿಮಗೆ ಬಂದಿಲ್ಲವೇ? ಇಲ್ಲಿದೆ ಸೂಕ್ತ ಪರಿಹಾರ ಕ್ರಮ!

Kobbari Kharidi kendra-45 ದಿನಗಳವರೆಗೆ ರೈತರ ನೋಂದಣಿ ಅವಕಾಶ:

ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ನೂತನ ಆದೇಶದ ಪ್ರಕಾರ 2024 ನೇ ಸಾಲಿನ ಕೇಂದ್ರ ಸರ್ಕಾರದ ಎಫ್.ಎ.ಕ್ಯೂ.ಗುಣಮಟ್ಟದ ಉಂಡೆ ಕೊಬ್ಬರಿ ಖರೀದಿ ಸಂಬಂಧ ರೈತರ ನೋಂದಣಿಯನ್ನು ದಿನಾಂಕ: 04.03.2024 ರಿಂದ ರಜಾ ದಿನಗಳು ಸೇರಿದಂತೆ ಮುಂದಿನ 45 ದಿನಗಳವರೆಗೆ ಗರಿಷ್ಠ ಮಿತಿ ಮುಕ್ತಾಯವಾಗುವವರೆಗೆ ಬೆಳಿಗ್ಗೆ 8.00 ಗಂಟೆಯಿಂದ ಸಾಯಂಕಾಲ 6.00 ಗಂಟೆಯವರೆಗೆ ಪ್ರಾರಂಭಿಸಲು ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ರವರ ಅವಗಾಹನೆಗೆ ತಂದು ಕ್ರಮ ಕೈಗೊಳ್ಳಲು ತಿಳಿಸಲಾಗಿದೆ.

ಇದನ್ನೂ ಓದಿ: How to link rtc to aadhar- ಮೊಬೈಲ್ ನಲ್ಲೇ ಪಹಣಿಗೆ ಆಧಾರ್ ಕಾರ್ಡ ಜೋಡಣೆ ಮಾಡಲು ವೆಬ್ಸೈಟ್ ಲಿಂಕ್ ಬಿಡುಗಡೆ!

Copra msp farmer registration- ರೈತರು ಎಲ್ಲಿ ನೋಂದಣಿ ಮಾಡಿಕೊಳ್ಳಬೇಕು:

ಉಂಡೆ ಕೊಬ್ಬರಿಯನ್ನು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಲು ಇಚ್ಚಿಸುವ ರೈತರು ಪ್ರೂಟ್ಸ್ ಐಡಿ(FID) ಯನ್ನು ನೀಡಿ ನಿಮ್ಮ ಜಿಲ್ಲೆಯ ಹತ್ತಿರದ  ಕೊಬ್ಬರಿ ಖರೀದಿ ಕೇಂದ್ರವನ್ನು ಭೇಟಿ ಮಾಡಿ ನೋಂದಣಿ ಮಾಡಿಕೊಳ್ಳಬೇಕು.

Copra msp price- ಉಂಡೆ ಕೊಬ್ಬರ ಖರೀದಿ ಬೆಂಬಲ ಬೆಲೆ ಎಷ್ಟು?

2024 ನೇ ಸಾಲಿನ ಕೇಂದ್ರ ಸರ್ಕಾರ ನಿಗದಿಪಡಿಸಲಾದ ಉಂಡೆ ಕೊಬ್ಬರಿ ಬೆಲೆ ಪ್ರತಿ ಕ್ವಿಂಟಾಲ್ ಗೆ ರೂ 12,000/- ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹ ಧನ ರೂ 1,500 ಸೇರಿ ಒಟ್ಟಾರೆ ಪ್ರತಿ ಕ್ವಿಂಟಾಲ್ಗೆ ರೂ 13,500/- ನಿಗದಿಪಡಿಸಲಾಗಿರುತ್ತದೆ.

ಇದನ್ನೂ ಓದಿ: PM-Surya Ghar yojana- ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ ಅರ್ಜಿ ಆಹ್ವಾನ! ಇಲ್ಲಿದೆ ಅರ್ಜಿ ಸಲ್ಲಿಸುವ ವಿಧಾನದ ವಿವರ.

ನೋಂದಣಿ ಪ್ರಕ್ರಿಯ ಜೊತೆಗೆ ಖರೀದಿ ಅವಧಿಯನ್ನು ಮೂರು ತಿಂಗಳವರೆಗೆ:

ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ಆದೇಶದಲ್ಲಿ ಖರೀದಿ ಪ್ರಕ್ರಿಯೆಗೆ ನಿಯಮಾನುಸಾರ ಅವಶ್ಯವಿರುವ ಪ್ರಕ್ರಿಯೆಗಳನ್ನು ಜಿಲ್ಲಾಡಳಿತ ಮತ್ತು ಖರೀದಿ ಸಂಸ್ಥೆಗಳು ಪೂರ್ವಭಾವಿ ಸಿದ್ಧತೆಗಳನ್ನು, ಅವಶ್ಯವಿರುವ ತಂತ್ರಾಂಶವನ್ನು ಅಳವಡಿಸಿಕೊಂಡ ತಕ್ಷಣದಿಂದ ಜಾರಿಗೆ ಬರುವಂತೆ 45 ದಿನಗಳವರೆಗೆ ರೈತರ ನೋಂದಣಿ ಹಾಗೂ ನೋಂದಣಿ ಪ್ರಕ್ರಿಯ ಜೊತೆಗೆ ಖರೀದಿ ಅವಧಿಯನ್ನು ಮೂರು ತಿಂಗಳವರೆಗೆ ನಿಗಧಿಪಡಿಸಿ ಆದೇಶಿಸಲಾಗಿರುತ್ತದೆ.

ಜಿಲ್ಲಾವಾರು ಬೆಂಬಲ ಬೆಲೆಯಲ್ಲಿ ಖರೀದಿ ಮಾಡುವ ಉಂಡೆ ಕೊಬ್ಬರಿ ವಿವರ ಹೀಗಿದೆ:

ತುಮಕೂರು- 3,50,000 (ಕ್ವಿಂಟಾಲ್ ನಲ್ಲಿ)
ಮಂಡ್ಯ- 40,000
ಮೈಸೂರು- 5,000
ದಕ್ಷಿಣಕನ್ನಡ- 1,000
ರಾಮನಗರ- 25,000
ಚಾಮರಾಜನಗರ- 1,500
ಚಿತ್ರದುರ್ಗ- 40,000
ಹಾಸನ- 1,75,000
ಚಿಕ್ಕಮಗಳೂರು- 55,000
ಒಟ್ಟು- 6,92,500

ಇದನ್ನೂ ಓದಿ: RTC adhar link- ಪಹಣಿ/RTC ಮತ್ತು ಆಧಾರ್ ಜೋಡಣೆಗೆ ಕಂದಾಯ ಇಲಾಖೆಯಿಂದ ನೂತನ ಕ್ರಮ: ಸಚಿವ ಕೃಷ್ಣಬೈರೇಗೌಡ.

ಖರೀದಿ ಪ್ರಕ್ರಿಯೆಗೆ ಸಂಬಂಧಿಸಿದಮ್ತೆ ಯಾವುದೇ ಸಮಸ್ಯೆಗಳು ಉದ್ಬವಿಸಿದಲ್ಲಿ ಸಹಾಯವಾಣಿ ಸಂಖ್ಯೆಗಳು: 80 22253968 ಅಥವಾ ಉಚಿತ ದೂರವಾಣಿ ಸಂಖ್ಯೆ: 1800-425-1552 ಗೆ ಸಂಪರ್ಕಿಸಬಹುದು.

ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ಅಧಿಕೃತ ವೆಬ್ಸೈಟ್: Click here

Facebook
Twitter
Telegram
WhatsApp
Picture of siddesh

siddesh

Leave a Comment

Top Stories

Bele parihara

Bele parihara- ಮಳೆಯಿಂದ ಜಮೀನಿನ ಬೆಳೆ ಹಾನಿಯಾಗಿದ್ದರೆ ಪರಿಹಾರ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

ರಾಜ್ಯದಲ್ಲಿ ಕಳೆದ 2 ವಾರದಿಂದ ಬಿಟ್ಟು ಬಿಡದೇ ನಿರಂತರವಾಗಿ ಮಳೆ ಬರುತ್ತಿರುವ ಪರಿಣಾಮ ಅನೇಕ ಜಿಲ್ಲೆಗಳಲ್ಲಿ ಅತೀಯಾದ ಮಳೆಯಿಂದ ಬೆಳೆ ನಾಶವಾಗಿದ್ದು(Bele parihara) ಅಂತಹ ರೈತರು ಬೆಳೆ ಹಾನಿಯ ಪರಿಹಾರ ಪಡೆಯಲು ಅರ್ಜಿ ಸಲ್ಲಿಸಬಹುದು.

land documents

agricultural land documents: ಜಮೀನನ್ನು ಖರೀದಿ ಮಾಡುವ ಮುನ್ನ ಯಾವೆಲ್ಲಾ ದಾಖಲೆಗಳನ್ನು ಚೆಕ್ ಮಾಡಬೇಕು?

ಕೃಷಿ ಭೂಮಿ ಖರೀದಿಸುವ ಮುಂಚೆ ಯಾವ ಯಾವ ದಾಖಲೆಗಳನ್ನು ಮುಖ್ಯವಾಗಿ ಚೆಕ್ ಮಾಡಬೇಕು ಮತ್ತು ಯಾವೆಲ್ಲ ಮಾಹಿತಿಯನ್ನು ಪರೀಶೀಲನೆ ಮಾಡಬೇಕು? ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಒಂದೊಮ್ಮೆ ನೀವು ಖರೀದಿ ಮಾಡುತ್ತಿರುವ ಜಮೀನಿನ ದಾಖಲೆಗಳು

sarakri yojane

sarakri yojane- ಸಂಚಾರಿ ಮಾರಾಟ ಮಳಿಗೆ ಖರೀದಿಗೆ ರೂ 5.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

ಡಾ ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದಿಂದ ವಿವಿಧ ಯೋಜನೆಯಡಿ ಸಬ್ಸಿಡಿಯ ಪ್ರಯೋಜನ ಪಡೆದುಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 30-10-2024 ಕೊನೆಯ ದಿನಾಂಕವಾಗಿದೆ. ಕುಶಲಕಮಿಗಳ ಅಭಿವೃದ್ದಿಗೆ