Diploma Agriculture Application-2024-25ನೇ ಸಾಲಿನ ಡಿಪ್ಲೊಮಾ(ಕೃಷಿ) ಕೋರ್ಸ್‌ಗೆ ಅರ್ಜಿ ಆಹ್ವಾನ!

Facebook
Twitter
Telegram
WhatsApp

2024-25ನೇ ಸಾಲಿನ ಡಿಪ್ಲೊಮಾ(ಕೃಷಿ) ಕೋರ್ಸ್‌ಗೆ ಅರ್ಜಿ ಆಹ್ವಾನಿಸಲಾಗಿದ್ದು ಅರ್ಹ ಆಸಕ್ತ ಅರ್ಜಿದಾರರು(Diploma Agriculture Application) ಈ ಲೇಖನದಲ್ಲಿ ವಿವರಿಸಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ತಿಳಿದುಕೊಂಡು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬಹುದು.

ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರಿನ ಅಧೀನದಲ್ಲಿರುವ ಕೃಷಿ ಮಹಾವಿದ್ಯಾಲಯ, ವಿ.ಸಿ. ಫಾರಂ, ಮಂಡ್ಯ, ದಲ್ಲಿ 2024-25ನೇ ಶೈಕ್ಷಣಿಕ ವರ್ಷದಲ್ಲಿ ಎರಡು ವರ್ಷಗಳ ಡಿಪ್ಲೊಮಾ (ಕೃಷಿ) ಕೋರ್ಸ್‌ಗೆ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬೋಧನಾ ಕ್ರಮ ಮತ್ತು ಮಾಧ್ಯಮ: ಡಿಪ್ಲೊಮಾ (ಕೃಷಿ) ಯನ್ನು ಕನ್ನಡ ಮಾಧ್ಯಮದಲ್ಲಿ ಸೆಮಿಸ್ಟರ್ (4 ಸೆಮಿಸ್ಟರ್) ಪದ್ಧತಿಯಲ್ಲಿ ಬೋಧಿಸಲಾಗುತ್ತದೆ.

ಇದನ್ನೂ ಓದಿ: Ayushman card-2024: ನಿಮ್ಮ ಬಳಿ ಈ ಕಾರ್ಡ ಇದ್ದರೆ 5 ಲಕ್ಷದವರೆಗೆ ಉಚಿತ ಆರೋಗ್ಯ ಚಿಕಿತ್ಸೆ ಪಡೆಯಬಹುದು?

Eligibility for diploma agriculture-ಪ್ರವೇಶ ಅರ್ಹತೆ:

ಕೃಷಿ ವಿಶ್ವವಿದ್ಯಾನಿಲಯದಲ್ಲಿ ಡಿಪ್ಲೊಮಾ. (ಕೃಷಿ) ಕೋರ್ಸ್‌ಗೆ ಪ್ರವೇಶ ಕೋರುವ ಅಭ್ಯರ್ಥಿಗಳು ಎಸ್.ಎಸ್. ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ಪಠ್ಯವನ್ನು ಭಾಷೆಯಾಗಿ ಅಭ್ಯಸಿಸಿ ಕನಿಷ್ಠ ಶೇ.45 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು (ಪ.ಜಾ./ಪ.ಪಂ./ಪ್ರವರ್ಗ-1 ರವರುಗಳಿಗೆ ಕನಿಷ್ಠ ಶೇ.40 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು).

ದಿನಾಂಕ: 30-06-2024 ರಂದು ಅಭ್ಯರ್ಥಿಗಳ ವಯಸ್ಸು 19 ವರ್ಷಗಳನ್ನು ಮೀರಿರಬಾರದು.

ರೈತರ ಹಾಗು ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ.50ರಷ್ಟು ಸೀಟುಗಳನ್ನು ಡಿಪ್ಲೊಮಾ (ಕೃಷಿ) ಪ್ರವೇಶಾತಿಗೆ ಮೀಸಲಿಡಲಾಗಿದೆ.

ಅರ್ಜಿ ಹಾಗೂ ಮಾಹಿತಿ ಪುಸ್ತಕವನ್ನು ಕೃಷಿ ವಿಶ್ವವಿದ್ಯಾನಿಲಯ ಜಿ.ಕೆ.ವಿ.ಕೆ., ಬೆಂಗಳೂರಿನ ವೆಬ್‌ಸೈಟ್ www.uasbangalore.edu.in ನಲ್ಲಿ 15-07-2024 ರಿಂದ 10-08-2024 ರವರೆಗೆ  ಡೌನ್ಲೋಡ್ ಮಾಡಬಹುದು. ಈ ರೀತಿ ವೆಬ್‌ಸೈಟ್ ಮುಖಾಂತರ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು, ಅರ್ಜಿಯ ನಿಗದಿತ ಶುಲ್ಕವನ್ನು ಡಿ.ಡಿ. ರೂಪದಲ್ಲಿ ಲಗತ್ತಿಸಿ, ದಿನಾಂಕ. 10-08-2024 ರೊಳಗೆ ಕಳುಹಿಸಿಕೊಡಬೇಕು. ದಿನಾಂಕ:11-08-2024ರ ನಂತರ ಡಿ.ಡಿ. ಯನ್ನು ಪಡೆದು ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Karnataka post office jobs-2024: ಕರ್ನಾಟಕ ಅಂಚೆ ಇಲಾಖೆಯಲ್ಲಿ 1900+ ಹುದ್ದೆಗಳ ಬೃಹತ್ ನೇಮಕಾತಿ!

Application Fee-ಅರ್ಜಿ ಶುಲ್ಕ:

• ಸಾಮಾನ್ಯ ವರ್ಗದವರಿಗೆ ರೂ.500/-ಪ.ಜಾ./ಪ.ಪಂ./ಪ್ರವರ್ಗ-1 ರವರಿಗೆ ರೂ. 250/-ಆಗಿದ್ದು, ರಾಷ್ಟ್ರೀಕೃತ ಬ್ಯಾಂಕ್‌ಗಳ (Nationalised Bank) ಮೂಲಕ ಡಿ.ಡಿಯನ್ನು Comptroller, UAS, GKVK, Bangalore-560065 ಇವರ ಹೆಸರಿನಲ್ಲಿ ಪಡೆದು ಎಲ್ಲಾ ಅಗತ್ಯ ಅಡಕಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಕುಲಸಚಿವರು, ಕೃಷಿ ವಿಶ್ವವಿದ್ಯಾನಿಲಯ, ಜಿ.ಕೆ.ವಿ.ಕೆ., ಬೆಂಗಳೂರು-560065 ಇಲ್ಲಿಗೆ ದಿನಾಂಕ 10-08-2024 ರ (ಸಂಜೆ 4.00 ಗಂಟೆ) ಒಳಗೆ ತಲುಪುವಂತೆ ಖುದ್ದಾಗಿ ಅಥವಾ ಅಂಚೆ ಮೂಲಕ ಕಳುಹಿಸಬಹುದು.

• ದಿನಾಂಕ: 11-08-2024 ರ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಉಲ್ಲೇಖಿಸಲಾಗಿದೆ.

Selection method-ಪ್ರವೇಶ ಮತ್ತು ಆಯ್ಕೆ ವಿಧಾನ :

ಸರ್ಕಾರದ ಆದೇಶಗಳ ಅನ್ವಯ ಸೀಟುಗಳನ್ನು ಭರ್ತಿ ಮಾಡಲಾಗುವುದು.

ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ರೋಸ್ಟರ್ ಪದ್ಧತಿಯನ್ನು ಅಳವಡಿಸಿ, ಪ್ರವೇಶಕ್ಕೆ ಆಯ್ಕೆ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ.

Website link-ಇನ್ನು ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ ಲಿಂಕ್: Click here

Facebook
Twitter
Telegram
WhatsApp
Picture of siddesh

siddesh

Leave a Comment

Top Stories

land documents

agricultural land documents: ಜಮೀನನ್ನು ಖರೀದಿ ಮಾಡುವ ಮುನ್ನ ಯಾವೆಲ್ಲಾ ದಾಖಲೆಗಳನ್ನು ಚೆಕ್ ಮಾಡಬೇಕು?

ಕೃಷಿ ಭೂಮಿ ಖರೀದಿಸುವ ಮುಂಚೆ ಯಾವ ಯಾವ ದಾಖಲೆಗಳನ್ನು ಮುಖ್ಯವಾಗಿ ಚೆಕ್ ಮಾಡಬೇಕು ಮತ್ತು ಯಾವೆಲ್ಲ ಮಾಹಿತಿಯನ್ನು ಪರೀಶೀಲನೆ ಮಾಡಬೇಕು? ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಒಂದೊಮ್ಮೆ ನೀವು ಖರೀದಿ ಮಾಡುತ್ತಿರುವ ಜಮೀನಿನ ದಾಖಲೆಗಳು

sarakri yojane

sarakri yojane- ಸಂಚಾರಿ ಮಾರಾಟ ಮಳಿಗೆ ಖರೀದಿಗೆ ರೂ 5.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

ಡಾ ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದಿಂದ ವಿವಿಧ ಯೋಜನೆಯಡಿ ಸಬ್ಸಿಡಿಯ ಪ್ರಯೋಜನ ಪಡೆದುಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 30-10-2024 ಕೊನೆಯ ದಿನಾಂಕವಾಗಿದೆ. ಕುಶಲಕಮಿಗಳ ಅಭಿವೃದ್ದಿಗೆ

Crop insurance

Rabi Crop Insurance-ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಅರ್ಜಿ ಆಹ್ವಾನ!

ಪ್ರಸ್ತುತ ರಾಜ್ಯದಲ್ಲಿ ಮುಂಗಾರು ಹಂಗಾಮು ಮುಕ್ತಾಯವಾಗಿ ಹಿಂಗಾರು ಹಂಗಾಮು ಆರಂಭವಾಗುತ್ತಿದ್ದು ರೈತರು ತಮ್ಮ ಬೆಳೆಗಳಿಗೆ ವಿಮೆಯನ್ನು(Rabi Crop Insurance) ಮಾಡಿಸಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಮ್ಮ ಹಳ್ಳಿ ವ್ಯಾಪ್ತಿಯಲ್ಲಿ ಯಾವೆಲ್ಲ ಬೆಳೆಗಳಿಗೆ ವಿಮೆಯನ್ನು ಮಾಡಿಸಬಹುದು? ಅರ್ಜಿ