E-kyc status- ಇ-ಕೆವೈಸಿ ಆದವರಿಗೆ ಮಾತ್ರ ಸಿಗಲಿದೆ ಪಿಎಂ ಕಿಸಾನ್ ಹಣ! ಇ-ಕೆವೈಸಿ ಆಗಿದಿಯಾ? ಚೆಕ್ ಮಾಡಿಕೊಳ್ಳಿ!

Facebook
Twitter
Telegram
WhatsApp

ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅರ್ಜಿಯ ಇ-ಕೆವೈಸಿ ಅಗಿರುವುದನ್ನು ರೈತರು ಖಚಿತಪಡಿಸಿಕೊಳ್ಳಲು ಕೇಂದ್ರ ಸರಕಾರದಿಂದ ಅಧಿಕೃತ ಪಿಎಂ ಕಿಸಾನ್ ಯೋಜನೆಯ(PM-kisan E-kyc status) ವೆಬ್ಸೈಟ್ ನಲ್ಲಿ ಅವಕಾಶ ನೀಡಲಾಗಿದೆ. ಈ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ರೈತರು ತಮ್ಮ ಮೊಬೈಲ್ ನಲ್ಲೇ ಇ-ಕೆವೈಸಿ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಬಹುದು.

ಕೃಷಿ ಇಲಾಖೆಯಿಂದ ಪಿಎಂ ಕಿಸಾನ್ ಯೋಜನೆಯಡಿ ಅರ್ಥಿಕ ನೆರವು ಪಡೆಯಲು ರೈತರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕು ಎಂದು ಇಲಾಖೆಯಿಂದ ಈಗಾಗಲೇ ಪ್ರಕಟಣೆ ಹೊರಡಿಸಲಾಗಿದ್ದು, ನಿಮ್ಮ ಇ-ಕೆವೈಸಿ(E-kyc status) ಅಗಿರುವುದನ್ನು ಖಚಿತಪಡಿಸಿಕೊಳ್ಳುವುದು ಹೇಗೆ ಎಂದು ಇಲ್ಲಿ ವಿವರಿಸಲಾಗಿದೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ(kisan samman nidhi) ದೇಶದ ರೈತರ ಖಾತೆಗೆ ನೇರ ನಗದು ವರ್ಗಾವಣೆಯ(PM kisan E-kyc) ಮೂಲಕ 18ನೇ ಕಂತಿನ ಹಣ ಜಮಾ ಮಾಡಲಾಗುತ್ತಿದ್ದು, ಈ ಯೋಜನೆಯಡಿ ಇ-ಕೆವೈಸಿ ಆದವರಿಗೆ ಮಾತ್ರ ರೂ 2,000 ಹಣ ಜಮಾ ಅಗುತ್ತದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ಮಾಹಿತಿ ತಿಳಿಸಿದ್ದು, ರೈತರು ತಮ್ಮ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅರ್ಜಿಯ ಇ-ಕೆವೈಸಿ ಅಗಿರುವುದನ್ನು ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳವ ವಿಧಾನವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Kisan samman-ಕಿಸಾನ್ ಸಮ್ಮಾನ್ ರೂ 2,000 ಹಣ ರೈತರ ಖಾತೆಗೆ! ನಿಮಗೆ ಬಂತಾ ಚೆಕ್ ಮಾಡಿ!

PM-kisan E-kyc status- ಇಲ್ಲಿದೆ ಇ-ಕೆವೈಸಿ ಅಗಿರುವುದನ್ನು ಚೆಕ್ ಮಾಡಲು ವೆಬ್ಸೈಟ್ ಲಿಂಕ್:

ರೈತರು ಕೆಳಗೆ ವಿವರಿಸಿರುವ ವಿಧಾನವನ್ನು ಅನುಸರಿಸಿ ಕೇಂದ್ರದ ಅಧಿಕೃತ ಪಿಎಂ ಕಿಸಾನ್ ಜಾಲತಾಣವನ್ನು ಭೇಟಿ ಮಾಡಿ ಇ-ಕೆವೈಸಿ ಅಗಿರುವುದನ್ನು ಚೆಕ್ ಮಾಡಿಕೊಳ್ಳಬಹುದು.

ಎರಡು ಹಂತ ಅನುಸರಿಸಿ ನಿಮ್ಮ ಇ-ಕೆವೈಸಿ ಅಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಮೊದಲಿಗೆ ನಿಮ್ಮ ಪಿ ಎಂ ಕಿಸಾನ್ ಅರ್ಜಿಯ ರಿಜಿಸ್ಟರ್ ನಂಬರ್ ಅನ್ನು ಪಡೆದುಕೊಂಡು ನಂತರ ಇನ್ನೊಂದು ಟ್ಯಾಬ್ ಅನ್ನು ತೆರೆದುಕೊಂಡು ರಿಜಿಸ್ಟರ್ ನಂಬರ್ ಅನ್ನು ನಮೂದಿಸಿ ಇ-ಕೆವೈಸಿ ಸ್ಟೇಟಸ್ ಅನ್ನು ಖಚಿತಪಡಿಸಿಕೊಳ್ಳಬೇಕು.

ಇದನ್ನೂ ಓದಿ: Anganawadi job notification-2024: ಅಂಗನವಾಡಿ ಕೇಂದ್ರಗಳಲ್ಲಿ 552 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ನೇಮಕಾತಿ!

Step-1: ಪ್ರಥಮದಲ್ಲಿ ಈ pm kisan e-kyc status ಲಿಂಕ್ ಮೇಲೆ ಕ್ಲಿಕ್ ಮಾಡಿ ಕಿಸಾನ್ ಸಮ್ಮಾನ್ ಯೋಜನೆಯ ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು.

Step-2: ತದನಂತರ 10 ಸಂಖ್ಯೆಯ ಮೊಬೈಲ್ ನಂಬರ್ ಅನ್ನು ನಮೂದಿಸಿ ಪಕ್ಕದಲ್ಲಿ ಕಾಣಿಸುವ ಕ್ಯಾಪ್ಚರ್ ಕೋಡ್ ಅನ್ನು ಹಾಕಿ “Get mobile” ಬಟನ್ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ: Parihara farmer list-2024: ಹಳ್ಳಿವಾರು ಬೆಳೆ ಪರಿಹಾರ ಪಡೆಯಲು ಅರ್ಹರಿರುವ ರೈತರ ಪಟ್ಟಿ ಬಿಡುಗಡೆ!

Step-3: ಇದಾದ ಬಳಿಕ “Get mobile” ಬಟನ್ ಮೇಲೆ ಕ್ಲಿಕ್ ಮಾಡಿ ನಂತರ “OTP has been sent at registered mobile no” ಎಂದು ಮೇಸೆಜ್ ಬರುತ್ತದೆ ಇದಾದ ನಂತರ ನಿಮ್ಮ ಮೊಬೈಲ್ ಗೆ ಬಂದಿರುವ 4 ಸಂಖ್ಯೆ OTP ಅನ್ನು ಹಾಕಿ “Get Details” ಬಟನ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಅರ್ಜಿಯ Registration Number ತೋರಿಸುತ್ತದೆ ಇದನ್ನು ಒಂದು ಕಡೆ ಬರೆದುಕೊಂಡು ಮುಂದಿನ ಹಂತದ ವಿಧಾನವನ್ನು ಅನುಸರಿಸಬೇಕು.

Step-5: ಮೇಲಿನ ಹಂತಗಳನ್ನು ಅನುಸರಿಸಿ ರಿಜಿಸ್ಟರ್ ನಂಬರ್ ಅನ್ನು ಒಂದು ಕಡೆ ಬರೆದುಕೊಂಡು ನಂತರ ಈ PM-kisan E-kyc status ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಅರ್ಜಿಯ ರಿಜಿಸ್ಟರ್ ನಂಬರ್ ಅನು ಹಾಕಿ ಪಕ್ಕದಲ್ಲಿರುವ ಕ್ಯಾಪ್ಚ್ ಕೋಡ್ ಅನ್ನು ನಮೂದಿಸಿ “Get OTP” ಆಯ್ಕೆಯ ಮೇಲೆ ಒತ್ತಿ ನಿಮ್ಮ ಮೊಬೈಲ್ ನಂಬರ್ ಗೆ ಬರುವ 4 ಸಂಖ್ಯೆಯ OTP ಅನ್ನು ನಮೂದಿಸಿ “Get Data” ಬಟನ್ ಮೇಲೆ ಪಿ ಎಂ ಕಿಸಾನ್ ಯೋಜನೆ ಅರ್ಜಿಯ ಸಂಪೂರ್ಣ ವಿವರ ತೋರಿಸುತ್ತದೆ.

ಈ ಪೇಜ್ ನ ಮಧ್ಯ ಭಾಗದಲ್ಲಿ “Eligibility Status” ಆಯ್ಕೆ ಮೇಲೆ ಕ್ಲಿಕ್ ಮಾಡಿದರೆ ಇಲ್ಲಿ “Eligibility Status” ಆಯ್ಕೆಯಲ್ಲಿ “e-KYC Status :- Yes” ಎಂದು ತೋರಿಸಿದರೆ ಇ-ಕೆವೈಸಿ ಅಗಿದೆ ಎಂದು ಅರ್ಥ ಒಂದೊಮ್ಮೆ “e-KYC Status :- No” ಎಂದು ತೋರಿಸಿದರೆ ನಿಮ್ಮ ಇ-ಕೆವೈಸಿ ಅಗಿಲ್ಲ ಎಂದು ತಿಳಿಯಬೇಕು.

“e-KYC Status :- Yes” ಎಂದು ತೋರಿಸಿದರೆ ಮಾತ್ರ ಹಣ ಜಮಾ ಅಗುತ್ತದೆ!

ಮೇಲಿನ ವಿಧಾನವನ್ನು ಅನುಸರಿಸಿ ಪಿ ಎಂ ಕಿಸಾನ್ ವೆಬ್ಸೈಟ್ ಅನ್ನು ಪ್ರವೇಶ ಮಾಡಿ ಇ-ಕೆವೈಸಿ ಸ್ಟೇಟಸ್ ಅನ್ನು ಚೆಕ್ ಮಾಡಿದಾಗ “e-KYC Status :- Yes” ಎಂದು ತೋರಿಸಿದರೆ ಮಾತ್ರ ಈ ಯೋಜನೆಯಡಿ ರೈತರಿಗೆ ಪ್ರತಿ ನಾಲ್ಕು ತಿಂಗಳಿಗೊಮ್ಮೆ ರೂ 2,000 ಹಣ ಜಮಾ ಅಗುತ್ತದೆ.

Facebook
Twitter
Telegram
WhatsApp
Picture of siddesh

siddesh

Leave a Comment

Top Stories

land documents

agricultural land documents: ಜಮೀನನ್ನು ಖರೀದಿ ಮಾಡುವ ಮುನ್ನ ಯಾವೆಲ್ಲಾ ದಾಖಲೆಗಳನ್ನು ಚೆಕ್ ಮಾಡಬೇಕು?

ಕೃಷಿ ಭೂಮಿ ಖರೀದಿಸುವ ಮುಂಚೆ ಯಾವ ಯಾವ ದಾಖಲೆಗಳನ್ನು ಮುಖ್ಯವಾಗಿ ಚೆಕ್ ಮಾಡಬೇಕು ಮತ್ತು ಯಾವೆಲ್ಲ ಮಾಹಿತಿಯನ್ನು ಪರೀಶೀಲನೆ ಮಾಡಬೇಕು? ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಒಂದೊಮ್ಮೆ ನೀವು ಖರೀದಿ ಮಾಡುತ್ತಿರುವ ಜಮೀನಿನ ದಾಖಲೆಗಳು

sarakri yojane

sarakri yojane- ಸಂಚಾರಿ ಮಾರಾಟ ಮಳಿಗೆ ಖರೀದಿಗೆ ರೂ 5.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

ಡಾ ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದಿಂದ ವಿವಿಧ ಯೋಜನೆಯಡಿ ಸಬ್ಸಿಡಿಯ ಪ್ರಯೋಜನ ಪಡೆದುಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 30-10-2024 ಕೊನೆಯ ದಿನಾಂಕವಾಗಿದೆ. ಕುಶಲಕಮಿಗಳ ಅಭಿವೃದ್ದಿಗೆ

Crop insurance

Rabi Crop Insurance-ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಅರ್ಜಿ ಆಹ್ವಾನ!

ಪ್ರಸ್ತುತ ರಾಜ್ಯದಲ್ಲಿ ಮುಂಗಾರು ಹಂಗಾಮು ಮುಕ್ತಾಯವಾಗಿ ಹಿಂಗಾರು ಹಂಗಾಮು ಆರಂಭವಾಗುತ್ತಿದ್ದು ರೈತರು ತಮ್ಮ ಬೆಳೆಗಳಿಗೆ ವಿಮೆಯನ್ನು(Rabi Crop Insurance) ಮಾಡಿಸಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಮ್ಮ ಹಳ್ಳಿ ವ್ಯಾಪ್ತಿಯಲ್ಲಿ ಯಾವೆಲ್ಲ ಬೆಳೆಗಳಿಗೆ ವಿಮೆಯನ್ನು ಮಾಡಿಸಬಹುದು? ಅರ್ಜಿ