Veterinary department-ಪಶುಪಾಲನಾ ಇಲಾಖೆಯಿಂದ ಯಾವೆಲ್ಲ ಯೋಜನೆಯಡಿ ಸೌಲಭ್ಯ ಪಡೆಯಬಹುದು?

Facebook
Twitter
Telegram
WhatsApp

ಪಶುಪಾಲನಾ ಇಲಾಖೆಯಿಂದ ಯಾವೆಲ್ಲ ಯೋಜನೆಯಡಿ ಸೌಲಭ್ಯ ಪಡೆಯಬಹುದು? ಪ್ರಸ್ತುತ ವರ್ಷದಲ್ಲಿ ಜಾರಿಯಲ್ಲಿರುವ ಯೋಜನೆಗಳ(Veterinary department schems-2024) ವಿವರ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ಆಸಕ್ತ ಅರ್ಹ ರೈತರು ನಿಮ್ಮ ತಾಲ್ಲೂಕಿನ ಪಶುಪಾಲನಾ ಇಲಾಖೆಯನ್ನು ನೇರವಾಗಿ ಭೇಟಿ ಮಾಡಿ ಅಗತ್ಯ ದಾಖಲಾತಿಗಳನ್ನು ಓದಗಿಸಿ ಈ ಕೆಳಗೆ ತಿಳಿಸಿರುವ ಯೋಜನೆಗಳಿಗೆ ಅರ್ಜಿ ಸಲ್ಲಿಸಿ ಪ್ರಯೋಜನವನ್ನು ಪಡೆದುಕೊಳ್ಳಬಹುದು.

ಇದನ್ನೂ ಓದಿ: NLM ಯೋಜನೆಯಡಿ ರೂ 25 ಲಕ್ಷದವರೆಗೆ ಶೇ 50% ಸಬ್ಸಿಡಿಯಲ್ಲಿ ಸ್ವ-ಉದ್ಯೋಗ ಮಾಡಲು ಅವಕಾಶ! ಇಲ್ಲಿದೆ ಸಂಪೂರ್ಣ ಮಾಹಿತಿ!

Karnataka Veterinary department Yojana-ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಪ್ರಮುಖ ಯೋಜನೆಗಳು ಹೀಗಿವೆ:

1) ಹಾಲು ಉತ್ಪಾದಕರಿಗೆ ಪ್ರೋತ್ಸಾಹ!

ಕೆ.ಎಂ.ಎಪ್ ಡೈರಿಗಳಿಗೆ ಹಾಲನ್ನು ಹಾಕುವ ರೈತರಿಗೆ  ಪ್ರತಿ ಲೀಟರ್ ಗೆ ರೂ 5/- ಅನ್ನು ಹೆಚ್ಚುವರಿಯಾಗಿ ಸಹಾಯಧನ ನೀಡಲಾಗುತ್ತದೆ. ಇದಲ್ಲದೇ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ಎಮ್ಮೆಯನ್ನು ಖರೀದಿ ಮಾಡಲು ರೈತರಿಗೆ ನೆರವು ನೀಡಲು ಮಹಿಳೆಯರಿಗೆ ಶೇ ರ ಬಡ್ಡಿ ಸಹಾಯಧನ ಒದಗಿಸಲಾಗುತ್ತದೆ.

2) ರಾಸುಗಳಿಗೆ ಲಸಿಕೆ ಹಾಕುವ ಕಾರ್ಯಕ್ರಮ:

ಕಾಲುಬಾಯಿ ರೋಗ, ಕಂದುರೋಗ, ಪಿ.ಪಿ,ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳು ಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ದ ಉಚಿತವಾಗಿ ಈ ಯೋಜನೆಯಡಿಯಲ್ಲಿ ಲಸಿಕೆಯನ್ನು ಹಾಕಲಾಗುತ್ತದೆ.

3) ನಾಟಿ ಕೋಳಿ ಮರಿಗಳ ವಿತರಣೆ:

ಈ ಯೋಜನೆಯಡಿ ಆಯ್ದ ಮಹಿಳಾ ಸ್ವ-ಸಹಾಯ ಗುಂಪಿನ ಗ್ರಾಮೀಣ ಭಾಗದ ಸದಸ್ಯರಿಗೆ ತಲಾ 20 ಆರುವಾರದ ನಾಟಿ ಕೋಳಿ ಮರಿಗಳನ್ನು ನೀಡಲಾಗುತ್ತದೆ.

ಇದನ್ನೂ ಓದಿ: Diploma Agriculture Application-2024-25ನೇ ಸಾಲಿನ ಡಿಪ್ಲೊಮಾ(ಕೃಷಿ) ಕೋರ್ಸ್‌ಗೆ ಅರ್ಜಿ ಆಹ್ವಾನ!

4) ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ ನೀಡುವ ಯೋಜನೆ:

ಈ ಯೋಜನೆಯಡಿ 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಸಾವನ್ನಪ್ಪಿದಲ್ಲಿ ಗರಿಷ್ಟ 1,00,00 ರೂ ವರೆಗೆ ಪರಿಹಾರವನ್ನು ಪಡೆಯಬಹುದು.

5) ಕುರಿಗಾರರಿಗೆ ಅನುಗ್ರಹ ಯೋಜನೆ:

6 ತಿಂಗಳು ಮೇಲ್ಪಟ್ಟ ಕುರಿ/ಮೇಕೆಗಳು ಆಕಸ್ಮಿಕವಾಗಿ ಮರಣ ಹೊಂದಿದ್ದಲ್ಲಿ ರೂ 5000 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ 3500 ಪರಿಹಾರದ ನೆರವನ್ನು ನೀಡಲಾಗುತ್ತದೆ.

6) ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ:

ಈ ಯೋಜನೆಯ ಮೂಲಕ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20-1 ಕುರಿ/ಮೇಕೆ ಘಟಕಗಳನ್ನು NCDC ಸಾಲ ಮತ್ತು ರಾಜ್ಯ ಸರಕಾರದ ಸಹಾಯಧನದೊಂದಿಗೆ ನೀಡಲಾಗುತ್ತದೆ.

ಇದನ್ನೂ ಓದಿ: Ayushman card-2024: ನಿಮ್ಮ ಬಳಿ ಈ ಕಾರ್ಡ ಇದ್ದರೆ 5 ಲಕ್ಷದವರೆಗೆ ಉಚಿತ ಆರೋಗ್ಯ ಚಿಕಿತ್ಸೆ ಪಡೆಯಬಹುದು?

7) ಮೇವಿನ ಬೀಜ ಕಿರು ಪೊಟ್ಟಣ ವಿತರಣೆ:

ಹೈನುಗಾರಿಕೆಯಲ್ಲಿ ತೊಡಗಿಕೊಂಡಿರುವ ರೈತರಿಗೆ ನೆರವಾಗಲು ಬರಗಾಲ ಸಮಯದಲ್ಲಿ ಮೇವನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ಉಚಿತವಾಗಿ ಮೇವಿನ ಬೀಜವನ್ನು ಈ ಯೋಜನೆಯಡಿ ವಿತರಣೆ ಮಾಡಲಾಗುತ್ತದೆ.

8) ಮೇವು ಕತ್ತರಿಸುವ ಯಂತ್ರ ವಿತರಣೆ:

ಇಲಾಖೆಯಿಂದ ಶೇ 50% ಸಹಾಯಧನದಲ್ಲಿ ಮೇವು ಕತ್ತರಿಸುವ ಯಂತ್ರವನ್ನು ಈ ಯೋಜನೆಯಡಿ ವಿತರಣೆ ಮಾಡಲಾಗುತ್ತದೆ.

9) ಲಿಂಗನಿರ್ಧರಿತ ಮೀರ್ಯನಳಿಕೆ ಬಳಕೆ:

ಹೆಣ್ಣು ಕರುಗಳ ಸಂತತ್ತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯನ್ನು ಲಿಂಗನಿರ್ಧರಿತ ಮೀರ್ಯನಳಿಕೆಗಳನ್ನು ಬಳಸಲಾಗುತದೆ.

10) ಸಂಚಾರಿ ಪಶು ಚಿಕಿತ್ಸಾ ಘಟಕ:

ಸಂಚಾರಿ ಪಶುಚಿಕಿತ್ಸಾ ವಾಹನಗಳ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತದೆ ರೈತರು ಈ “1962” ಸಹಾಯವಾಣಿಗೆ ಕರೆ ಮಾಡಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು.

ಇದನ್ನೂ ಓದಿ: UPSC Pre-examination: ಕರ್ನಾಟಕ ಸರ್ಕಾರದಿಂದ ಪದವಿ ಶಿಕ್ಷಣದೊಂದಿಗೆ UPSC ತಯಾರಿಗೆ ಅರ್ಜಿ ಅಹ್ವಾನ!

How to apply-ಎಲ್ಲಿ ಅರ್ಜಿ ಸಲ್ಲಿಸಬೇಕು?

ಈ ಮೇಲೆ ತಿಳಿಸಿರುವ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಅರ್ಹ ರೈತರು ನಿಮ್ಮ ತಾಲ್ಲೂಕಿನ ಪಶುಪಾಲನಾ ಇಲಾಖೆಯನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಬಹುದು.

Veterinary department  website-ಇನ್ನು ಹೆಚ್ಚಿನ ಮಾಹಿತಿಗಾಗಿ:

ಪಶುಪಾಲನಾ ಇಲಾಖೆಯ ಅಧಿಕೃತ ವೆಬ್ಸೈಟ್: click here

Helpline number- ಸಹಾಯವಾಣಿ: 8277200300

Facebook
Twitter
Telegram
WhatsApp
Picture of siddesh

siddesh

Leave a Comment

Top Stories

land documents

agricultural land documents: ಜಮೀನನ್ನು ಖರೀದಿ ಮಾಡುವ ಮುನ್ನ ಯಾವೆಲ್ಲಾ ದಾಖಲೆಗಳನ್ನು ಚೆಕ್ ಮಾಡಬೇಕು?

ಕೃಷಿ ಭೂಮಿ ಖರೀದಿಸುವ ಮುಂಚೆ ಯಾವ ಯಾವ ದಾಖಲೆಗಳನ್ನು ಮುಖ್ಯವಾಗಿ ಚೆಕ್ ಮಾಡಬೇಕು ಮತ್ತು ಯಾವೆಲ್ಲ ಮಾಹಿತಿಯನ್ನು ಪರೀಶೀಲನೆ ಮಾಡಬೇಕು? ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಒಂದೊಮ್ಮೆ ನೀವು ಖರೀದಿ ಮಾಡುತ್ತಿರುವ ಜಮೀನಿನ ದಾಖಲೆಗಳು

sarakri yojane

sarakri yojane- ಸಂಚಾರಿ ಮಾರಾಟ ಮಳಿಗೆ ಖರೀದಿಗೆ ರೂ 5.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

ಡಾ ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದಿಂದ ವಿವಿಧ ಯೋಜನೆಯಡಿ ಸಬ್ಸಿಡಿಯ ಪ್ರಯೋಜನ ಪಡೆದುಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 30-10-2024 ಕೊನೆಯ ದಿನಾಂಕವಾಗಿದೆ. ಕುಶಲಕಮಿಗಳ ಅಭಿವೃದ್ದಿಗೆ

Crop insurance

Rabi Crop Insurance-ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಅರ್ಜಿ ಆಹ್ವಾನ!

ಪ್ರಸ್ತುತ ರಾಜ್ಯದಲ್ಲಿ ಮುಂಗಾರು ಹಂಗಾಮು ಮುಕ್ತಾಯವಾಗಿ ಹಿಂಗಾರು ಹಂಗಾಮು ಆರಂಭವಾಗುತ್ತಿದ್ದು ರೈತರು ತಮ್ಮ ಬೆಳೆಗಳಿಗೆ ವಿಮೆಯನ್ನು(Rabi Crop Insurance) ಮಾಡಿಸಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಮ್ಮ ಹಳ್ಳಿ ವ್ಯಾಪ್ತಿಯಲ್ಲಿ ಯಾವೆಲ್ಲ ಬೆಳೆಗಳಿಗೆ ವಿಮೆಯನ್ನು ಮಾಡಿಸಬಹುದು? ಅರ್ಜಿ